Urdu   /   English   /   Nawayathi

ಮೆಟ್ರೋ ನಿಲ್ದಾಣಕ್ಕೆ ಶಂಕಿತನ ಪ್ರವೇಶ: ಗೃಹ ಸಚಿವರ ಪ್ರತಿಕ್ರಿಯೆ ಹೀಗಿದೆ

share with us

ಬೆಂಗಳೂರು: 09 ಮೇ (ಫಿಕ್ರೋಖಬರ್ ಸುದ್ದಿ) ಮೆಟ್ರೋ ನಿಲ್ದಾಣದಲ್ಲಿ ಶಂಕಿತ ವ್ಯಕ್ತಿವೋರ್ವನ ಓಡಾಟ ಹಲವು ಆತಂಕಗಳನ್ನು ಸೃಷ್ಟಿಸಿದೆ. ಈ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಗೃಹ ಸಚಿವ ಎಂ.ಬಿ. ಪಾಟೀಲ್, ಶ್ರೀಲಂಕಾ ಘಟನೆ ನಂತರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದ್ದಾರೆ. ಸಚಿವ ಸಂಪುಟ ಸಭೆ ಆರಂಭಕ್ಕೂ ಮುನ್ನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ತಪ್ಪು ಕೂಡ ದೊಡ್ಡದಾಗುತ್ತದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇದನ್ನು ಯಾವುದೋ ಒಂದು ಜಾತಿಗೆ ತಳುಕು ಹಾಕುವುದು ಬೇಡ. ಗೃಹ ಸಚಿವನಾಗಿರುವ ನನ್ನನ್ನು ಕೂಡ ಪೊಲೀಸರು ಚೆಕ್ ಮಾಡಬಹುದು ಎಂದರು. ಇದೇ ಸಂದರ್ಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ರಮೇಶ್ ಜಾರಕಿಹೊಳಿ ಬಂಡಾಯ ವಿಚಾರ ಸಂಬಂಧ ನಮ್ಮ ವರಿಷ್ಠರು ಸಂಧಾನ ಮಾಡುತ್ತಾರೆ. ರಮೇಶ್ ಜೊತೆ ಮಾತುಕತೆ ಮಾಡಲಿಕ್ಕೆ ಪ್ರಯತ್ನಿಸಬಹುದು. ರಾಜೀನಾಮೆ ಕೊಡ್ತೀನಿ ಎಂದಿರುವ ರಮೇಶ್ ಅವರೇ ಅದಕ್ಕೆ ಪ್ರತಿಕ್ರಿಯೆ ನೀಡುತ್ತಾರೆ ಎಂದರು. ಇನ್ನು ಪ್ರಸ್ತುತ ಸ್ಥಾನದ ಬಗ್ಗೆ ಪಕ್ಷದ ಮುಖಂಡರು ನೀಡುತ್ತಿರುವ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಸಚಿವ ಜಾರಕಿಹೊಳಿ, ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ. ಮುಂದಿನ ಅವಧಿಯಲ್ಲಿ ನೋಡೋಣ ಎಂದು ತಿಳಿಸಿದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا