Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮೈಸೂರು: 23 ಮೇ 2019 (ಫಿಕ್ರೋಖಬರ್ ಸುದ್ದಿ) ‘ನನಗೆ ಇವಿಎಂ (ಮತಯಂತ್ರ) ಮೇಲೆ ಮೊದಲಿನಿಂದಲೂ ಅನುಮಾನ ಇದೆ. ಕೆಲವು ರಾಜ್ಯಗಳಲ್ಲಿ ಮತಯಂತ್ರಗಳನ್ನು ತಿರುಚಿರುವ ಸಾಧ್ಯತೆ ಇದೆ’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಆರೋಪಿಸಿದರು. ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಎಲ್ಲ ರಾಜ್ಯಗಳಲ್ಲೂ ಮತಯಂತ್ರಗಳನ್ನು ತಿರುಚುವುದಿಲ್ಲ. ಅನುಮಾನ ಬಾರದಿರಲಿ ಎಂದು ಕೆಲವು ಆಯ್ದ ರಾಜ್ಯಗಳಲ್ಲಿ ಈ ಕೆಲಸ ಮಾಡುತ್ತಾರೆ’ ಎಂದು ಹೇಳಿದರು. ‘ರಾಜ್ಯದಲ್ಲಿ ನಮಗೆ 16 ರಿಂದ 18 ಸ್ಥಾನಗಳು ಸಿಗಬೇಕು. ಆದರೆ, ಸಮೀಕ್ಷೆಯಲ್ಲಿ ನಮಗೆ 3 ರಿಂದ 5 ಸ್ಥಾನಗಳನ್ನು ತೋರಿಸಿದ್ದಾರೆ. ನನಗೆ ನಂಬಲು ಆಗುತ್ತಿಲ್ಲ. 24 ಕ್ಷೇತ್ರಗಳಲ್ಲಿ ಓಡಾಡಿ ಪ್ರಚಾರ ಮಾಡಿದ್ದೇನೆ. ವಸ್ತುಸ್ಥಿತಿ ಹೇಗಿದೆ ಎಂಬುದು ನನಗೆ ತಿಳಿದಿದೆ. ಮತಗಟ್ಟೆ ಸಮೀಕ್ಷೆಗಳು ಅಂದಾಜು ಮಾಡಿರುವ ಪ್ರಕಾರ ಫಲಿತಾಂಶ ಬಂದರೆ ಇವಿಎಂ ಮೇಲೆ ಸಂಶಯ ವ್ಯಕ್ತಪಡಿಸಬೇಕಾಗುತ್ತದೆ’ ಎಂದರು. ಶಾಸಕ ರೋಷನ್ ಬೇಗ್ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಿ, ‘ಅವರಿಗೆ ಮಂತ್ರಿ ಸ್ಥಾನ ಸಿಗಲಿಲ್ಲ. ಲೋಕಸಭೆ ಚುನಾವಣೆಗೂ ಟಿಕೆಟ್ ದೊರೆಯಲಿಲ್ಲ. ಅಧಿಕಾರದ ದಾಹ ಇದ್ದರೆ ಈ ರೀತಿ ಅಸಮಾಧಾನ ಆಗುತ್ತದೆ. ಪಕ್ಷವು ಅವರ ವಿರುದ್ಧ ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದರು. ‘ದುರಹಂಕಾರಿ ಅಲ್ಲ’:‘ನನ್ನದು ಹಳ್ಳಿ ಭಾಷೆ. ಒರಟಾಗಿ, ನೇರವಾಗಿ ಮಾತನಾಡುತ್ತೇನೆ. ಇದು ಕೆಲವರಿಗೆ ಹಿಡಿಸಲ್ಲ. ಅದಕ್ಕೆ ಸಿದ್ದರಾಮಯ್ಯ ದುರಹಂಕಾರಿ ಎಂದು ಟೀಕಿಸುತ್ತಾರೆ. ನಾನು ಯಾರೊಂದಿಗೂ ದುರಹಂಕಾರದಿಂದ ವರ್ತಿಸಿಲ್ಲ’ ಎಂದು ಸಿದ್ದರಾಮಯ್ಯ ಅವರು ರೋಷನ್ ಬೇಗ್ ಅವರಿಗೆ ತಿರುಗೇಟು ನೀಡಿದರು. ಸ್ವಾಭಿಮಾನ ಮತ್ತು ನಿಷ್ಠುರವಾಗಿ ಮಾತನಾಡುವವರು ದುರಹಂಕಾರಿಗಳಂತೆ ಕಾಣಿಸುತ್ತಾರೆ. ಅಂತಹ ಟೀಕೆಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದರು.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |