Urdu   /   English   /   Nawayathi

ಸಹಚರರಿಂದಲೇ ಬೆಂಗಳೂರಲ್ಲಿ ರೌಡಿಶೀಟರ್​ನ ಬರ್ಬರ ಹತ್ಯೆ

share with us

ಬೆಂಗಳೂರು: 25 ಮೇ 2019 (ಫಿಕ್ರೋಖಬರ್ ಸುದ್ದಿ) ಮಧ್ಯರಾತ್ರಿ ಗೆಳೆಯರೊಂದಿಗೆ ಊಟಕ್ಕಾಗಿ ಬಂದಾಗ ಜೊತೆಗಿದ್ದ ಸ್ನೇಹಿತರ ನಡುವೆಯೇ ಜಗಳವುಂಟಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ನನ್ನ ಕೊಲೆ ಮಾಡಿರುವ ಘಟನೆ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯ್ ಅಲಿಯಾಸ್ ವಿಜಿ ಕೊಲೆಯಾದ ರೌಡಿಶೀಟರ್. ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಯಶವಂತಪುರದ ಮಜಿದ್ ಬಳಿ ಘಟನೆ ನಡೆದಿದೆ. ನಿನ್ನೆ ಮಧ್ಯರಾತ್ರಿ ಕುಡಿದು ಊಟಕ್ಕೆಂದು ವಿಜಯ್ ತನ್ನ ಸಹಚರರ ಜೊತೆ ಹುಡುಕಾಟ ನಡೆಸಿದ್ದಾನೆ. ಈ ವೇಳೆ ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿದ್ದಾರೆ ಎನ್ನಲಾಗಿದೆ. ಮಾತಿಗೆ ಮಾತು ಬೆಳೆದು ನೋಡು ನೋಡುತ್ತಿದ್ದಂತೆ ಜಗಳ ತಾರಕಕ್ಕೇರಿದೆ. ಈ ವೇಳೆ ವಿಜಯ್​ನನ್ನು ವೈಷಮ್ಯ ಸಾಧಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ರೌಡಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪರಿಶೀಲನೆ ನಡೆಸಿ, ಯಶವಂತಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳ ಸುಳಿವು ದೊರೆತಿದ್ದು, ಶೀಘ್ರದಲ್ಲೇ ಹಂತಕರನ್ನು ಸೆರೆ ಹಿಡಿಯುವುದಾಗಿ ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا