Urdu   /   English   /   Nawayathi

ನಿಖಿಲ್ ರಂಪಾಟ: ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿ ಅವಾಸ್ತವಿಕ- ಮುಖ್ಯಮಂತ್ರಿ ಕುಮಾರಸ್ವಾಮಿ

share with us

ಬೆಂಗಳೂರು: 25 ಮೇ 2019 (ಫಿಕ್ರೋಖಬರ್ ಸುದ್ದಿ) ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಎದುರು ಸೋಲನುಭವಿಸಿದ ಬೇಸರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಮೈಸೂರಿನ ಹೋಟೆಲ್​ ಒಂದರಲ್ಲಿ ರಂಪಾಟ ಮಾಡಿದ್ದರು ಎಂದು ಕನ್ನಡದ ದಿನಪತ್ರಿಕೆಯೊಂದರಲ್ಲಿ ಶನಿವಾರ ಪ್ರಕಟವಾದ ಸುದ್ದಿ ಸತ್ಯಕ್ಕೆ ದೂರವಾಗಿದ್ದು ಕಪೋಲಕಲ್ಪಿತ ಎಂದು ಸ್ವತಃ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಟ್ಲೀಟ್ ಮಾಡಿರುವ ಅವರು, ಕನ್ನಡಪತ್ರಿಕೆಯೊಂದು ಇಂದು ನಿಖಿಲ್ ಕುಮಾರಸ್ವಾಮಿ ಕುರಿತು ಪ್ರಕಟಿಸಿದ ಸುದ್ದಿ ಅವಾಸ್ತವಿಕ ಹಾಗೂ ಕಪೋಲಕಲ್ಪಿತ. ನಿಖಿಲ್ ಚಾರಿತ್ರ್ಯ ವಧೆ ಮಾಡುವ ಈ ಸುದ್ದಿಯಿಂದ ಒಬ್ಬ ತಂದೆಯಾಗಿ ಅನುಭವಿಸಿದ ನೋವನ್ನು ಸಂಪಾದಕರ ಗಮನಕ್ಕೆ ತಂದಿದ್ದೇನೆ. ಮಾಧ್ಯಮಗಳು ಇಂಥ ಸುಳ್ಳುಸುದ್ದಿಗಳ ಮೂಲಕ ಭಾವನೆಗಳೊಂದಿಗೆ ಚೆಲ್ಲಾಟವಾಡದಿರಿ ಎನ್ನುವುದು ನನ್ನ ಕಳಕಳಿಯ ಮನವಿ," ಎಂದಿದ್ದಾರೆ. “ಚುನಾವಣೆಯಲ್ಲಿ ಸೋತ ನಂತರ ನಿಖಿಲ್​ ಮೈಸೂರಿನ ರ್ಯಾಡಿಸ್​​ ಬ್ಲೂ ಹೋಟೆಲ್​ನಲ್ಲಿ ತಂಗಿದ್ದರು. ಈ ವೇಳೆ ಸೋಲಿನ ಬೇಸರದಿಂದ ಚೆನ್ನಾಗಿ ಮದ್ಯ ಸೇವಿಸಿ ಜೋರಾಗಿ ಗಲಾಟೆ-ರಂಪಾಟ ಮಾಡಿದ್ದರು. ಈ ವೇಳೆ ಹೋಟೆಲ್​ ಮ್ಯಾನೇಜರ್​ ಹಾಗೂ ಸಿಬ್ಬಂದಿ ಎಷ್ಟೇ ಸಮಾಧಾನ ಪಡಿಸಿದರೂ ಅವರ ವಿರುದ್ಧವೂ ವಾಗ್ದಾಳಿ ನಡೆಸಿ ಗಲಾಟೆ ಮಾಡಿದ್ದರು.​ ಅಜ್ಜ ದೇವೇಗೌಡರ ವಿರುದ್ಧವೂ ಅವರು ಕೂಗಾಡಿದ್ದರು,” ಎಂದು ಕನ್ನಡ ದಿನಪತ್ರಿಕೆಯೊಂದು ವರದಿ ಪ್ರಕಟಿಸಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

H D Kumaraswamy@hd_kumaraswamy

ಕನ್ನಡಪತ್ರಿಕೆಯೊಂದು ಇಂದು ನಿಖಿಲ್ ಕುಮಾರಸ್ವಾಮಿ ಕುರಿತು ಪ್ರಕಟಿಸಿದ ಸುದ್ದಿ ಅವಾಸ್ತವಿಕ ಹಾಗೂ ಕಪೋಲಕಲ್ಪಿತ.ನಿಖಿಲ್ ಚಾರಿತ್ರ್ಯ ವಧೆ ಮಾಡುವ ಈ ಸುದ್ದಿಯಿಂದ ಒಬ್ಬ ತಂದೆಯಾಗಿ ಅನುಭವಿಸಿದ ನೋವನ್ನು ಸಂಪಾದಕರ ಗಮನಕ್ಕೆ ತಂದಿದ್ದೇನೆ.ಮಾಧ್ಯಮಗಳು ಇಂಥ ಸುಳ್ಳುಸುದ್ದಿಗಳ ಮೂಲಕ ಭಾವನೆಗಳೊಂದಿಗೆ ಚೆಲ್ಲಾಟವಾಡದಿರಿ ಎನ್ನುವುದು ನನ್ನ ಕಳಕಳಿಯ ಮನವಿ

1,031

11:29 AM - May 25, 2019

Twitter Ads info and privacy

454 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا