Urdu   /   English   /   Nawayathi

ವಿಜಯಪುರ: ಕಾಂಗ್ರೆಸ್ ನಾಯಕಿ ರೇಷ್ಮಾ ಕೊಲೆ ಆರೋಪಿ ಬಂಧನ

share with us

ವಿಜಯಪುರ: 03 ಜೂನ್ 2019 (ಫಿಕ್ರೋಖಬರ್ ಸುದ್ದಿ) ಕಾಂಗ್ರೆಸ್ ನಾಯಕಿ, ಜೆಡಿಎಸ್‍ನ ವಿಜಯಪುರ ಮಾಜಿ ಜಿಲ್ಲಾಧ್ಯಕ್ಷೆ, ರೇಷ್ಮಾ ಪಡೇಕನೂರ ಹತ್ಯೆಯ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ತೌಫಿಕ್ ಶೇಕ್ ಅಲಿಯಾಸ್ ಪೈಲ್ವಾನ್ ಎಂಬಾತನನ್ನು ಬಂಧಿಸಲಾಗಿದೆ. ಧೂಳಖೇಡ ಗ್ರಾಮದ ಸಮೀಪ ಆರೋಪಿಯ ಬಂಧನವಾಗಿದ್ದು ಬಸವನಬಾಗೇವಾಡಿ ಸಿಪಿಐ ಮಹದೇವ ಶಿರಹಟ್ಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಆರೋಪಿ ತೌಫಿಕ್ ಸೊಲ್ಲಾಪುರದ ಎಂಐಎಂ ಮುಖಂಡನಾಗಿದ್ದಾನೆ. ಈತನ ವಿರುದ್ಧ ರೇಷ್ಮಾ ಪತಿ ಖಾಜಾ ಬಂದೇ ನವಾಜ್ ಪೋಲೀಸರಿಗೆ ದೂರು ನೀಡಿದ್ದರು. ಪೋಲೀಸರು ಆರೋಪಿಯ ವಿರುದ್ಧ ಪಿಸಿ ಸೆಕ್ಷನ್ 302, 201 ಅಡಿಯಲ್ಲಿ ಕೇಸ್ ದಾಖಲಿಸಿತನಿಖೆ ಕೈಗೊಂಡಿದ್ದಾರೆ. ಕಾಂಗ್ರೆಸ್ ಮುಖಂಡರಾಗಿದ್ದ ರೇಷ್ಮಾ ಮೇ 17 ರಂದು ಹತ್ಯೆಯಾಗಿದ್ದು ವಿಜಯಪುರದ ಕೋಲ್ಹಾರ ಸೇತುವೆ ಕೆಳಗೆ ಶವವಾಗಿ ಪತ್ತೆಯಾಗಿದ್ದರು.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا