Urdu   /   English   /   Nawayathi

ಮನೆಯ ಮುಂದೆ ಮೂತ್ರ ಮಾಡುತ್ತಿದ್ದಕ್ಕೆ ಜಗಳ: ಪ್ರಶ್ನಿಸಿದವನ ಕೊಲೆ

share with us

ನವದೆಹಲಿ: 04 ಜೂನ್ 2019 (ಫಿಕ್ರೋಖಬರ್ ಸುದ್ದಿ) ಮನೆಯ ಮುಂದೆ ಮೂತ್ರ ಮಾಡುತ್ತಿದ್ದವನನ್ನು ಪ್ರಶ್ನಿಸಿದ್ದಕ್ಕೆ ಜಗಳ ನಡೆದು ವ್ಯಕ್ತಿಯನ್ನು ಸಿಮೆಂಟ್​ ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ದೆಹಲಿಯ ಗೋವಿಂದಪುರಿ ಏರಿಯಾದಲ್ಲಿ ನಡೆದಿದೆ. ಹಲವು ಪ್ರಕರಣಗಳಲ್ಲಿ ಅಪರಾಧಿಯಾಗಿದ್ದ ಲಿಲು ಎಂಬಾತ ಕೊಲೆಯಾದ ವ್ಯಕ್ತಿ. ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.

ಆಗಿದ್ದೇನು?

ಭಾನುವಾರ ರಾತ್ರಿ ವಿದ್ಯುತ್ ಇಲ್ಲದ ಕಾರಣ ಲಿಲು ಹಾಗೂ ಆತನ ಪತ್ನಿ ಮನೆಯ ಹೊರಗೆ ಕುಳಿತಿದ್ದರು. ಈ ವೇಳೆ ಪಕ್ಕದ ಏರಿಯಾದ 65 ವರ್ಷದ ವ್ಯಕ್ತಿಯೊಬ್ಬ ಮನೆಯ ಮುಂದೆ ಮೂತ್ರ ಮಾಡುತ್ತಿದ್ದನ್ನು ಲಿಲು ಪ್ರಶ್ನಿಸಿದ್ದ. ಮಾತಿಗೆ ಮಾತು ಬೆಳೆದು ಲಿಲು, ಹಿರಿಯ ವ್ಯಕ್ತಿಗೆ ಹೊಡೆದಿದ್ದಾನೆ. ಇದನ್ನು ಗಮನಿಸಿದ ಆತನ ಮಕ್ಕಳು ಲಿಲು ಮೇಲೆ ಹಲ್ಲೆ ನಡೆಸಿದ್ದಾರೆ. ಜಗಳ ನಡೆಯುತ್ತಿದ್ದ ವೇಳೆ ಒಬ್ಬ ಲಿಲು ತಲೆಗೆ ಸಿಮೆಂಟ್​ ಇಟ್ಟಿಗೆಯಿಂದ ಬಲವಾಗಿ ಹೊಡೆದಿದ್ದಾನೆ. ಕೆಳಗೆ ಬಿದ್ದು ಲಿಲು ಪ್ರಜ್ಞೆ ತಪ್ಪುವವರೆಗೂ ಆತನ ಮೇಲೆ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಲಿಲುವನ್ನು ಏಮ್ಸ್​ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಹಲ್ಲೆ ನಡೆಸಿದವರಿಗೂ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲೆ ಅಪರಾಧದಡಿ ಇವರ ಮೇಲೆ ಕೇಸು ದಾಖಲಾಗಿದೆ. ಅಲ್ಲದೆ, ಕೊಲೆಯಾದ ಲಿಲು ಸಹ ಕಳ್ಳತನ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಪರಾಧಿ ಎಂದು ತನಿಖೆ ವೇಳೆ ತಿಳಿದುಬಂದಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا