Urdu   /   English   /   Nawayathi

ಯಾವುದೇ ಕಾರಣಕ್ಕೂ ಬಿಜೆಪಿ ಸೇರಲ್ಲ, ಕಟ್ಟುಕತೆ ನಂಬಬೇಡಿ: ಜಿ.ಟಿ.ದೇವೇಗೌಡ

share with us

ಮೈಸೂರು: 04 ಜೂನ್ 2019 (ಫಿಕ್ರೋಖಬರ್ ಸುದ್ದಿ) ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ. ಏನೇನೊ ಕಟ್ಟುಕತೆಗಳನ್ನು ನಂಬಬೇಡಿ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಬಿಜೆಪಿಗೆ ಹೋಗಲ್ಲ ಅಂತ ಎಷ್ಟು ಸಲ ಹೇಳಬೇಕು. ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಉನ್ನತ ಶಿಕ್ಷಣ ಸಚಿವನ ಸ್ಥಾನವನ್ನು ಪಕ್ಷ ನನಗೆ ನೀಡಿದೆ. ಬಿಜೆಪಿಗೆ ಹೋಗುವಂತಹ ಪ್ರಮೇಯ ಏನಿದೆ ಎಂದು ಪ್ರಶ್ನಿಸಿದರು. ‘ಬಿಜೆಪಿಯ ಯಾವುದೇ ಮುಖಂಡರು ಪಕ್ಷಕ್ಕೆ ಬನ್ನಿ ಎಂದು ನನ್ನನ್ನು ಕರೆದಿಲ್ಲ. ನಾನು ಆ ಪಕ್ಷದ ನಾಯಕರ ಜತೆ ಮಾತನಾಡಿಯೂ ಇಲ್ಲ. ಈ ಹಿಂದೆ ಐದು ವರ್ಷ ಬಿಜೆಪಿಯಲ್ಲಿದ್ದ ನಾನು, ಆ ಪಕ್ಷ ಏನು ಎಂಬುದನ್ನು ಚೆನ್ನಾಗಿ ಬಲ್ಲೆ’ ಎಂದರು. ಎಚ್‌.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಮೈತ್ರಿ ಸರ್ಕಾರ ಐದು ವರ್ಷ ಪೂರೈಸಬೇಕು ಎಂಬುದು ಮಾತ್ರ ನಮ್ಮ ಮುಂದಿರುವ ಗುರಿ ಎಂದು ತಿಳಿಸಿದರು. 

ಸತ್ಯಶೋಧನಾ ಸಮಿತಿ ರಚನೆಯಾಗಲಿ

ಕಾಂಗ್ರೆಸ್‌ ಪಕ್ಷವು ಲೋಕಸಭೆ ಚುನಾವಣೆಯ ಸೋಲಿಗೆ ಕಾರಣಗಳನ್ನು ಹುಡುಕಲು ಸತ್ಯಶೋಧನಾ ಸಮಿತಿ ರಚಿಸಿದೆ. ಅದೇ ರೀತಿ ಜೆಡಿಎಸ್‌ ಅಭ್ಯರ್ಥಿಗಳ ಸೋಲಿಗೆ ಕಾರಣಗಳನ್ನು ತಿಳಿಯಲು ಸಮಿತಿ ರಚಿಸುವಂತೆ ಹೈಕಮಾಂಡ್‌ಗೆ ಒತ್ತಾಯಿಸಲಾಗುವುದು ಎಂದು ಹೇಳಿದರು. ಎಚ್‌.ವಿಶ್ವನಾಥ್‌ ರಾಜೀನಾಮೆ ವಿಚಾರದ ಕುರಿತು ಪ್ರತಿಕ್ರಿಯಿಸಿ, ವಿಶ್ವನಾಥ್ ಅವರು ಹಿರಿಯರು ಎಂಬ ಕಾರಣ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಅಧ್ಯಕ್ಷ ಸ್ಥಾನದಲ್ಲಿ ಅವರೇ ಮುಂದುವರಿಯಬೇಕು ಎಂಬುದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಬಯಕೆ ಎಂದರು.

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا