Urdu   /   English   /   Nawayathi

ಸಾಗರ ಬಳಿ ಭೀಕರ ಅಪಘಾತ: ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

share with us

ಶಿವಮೊಗ್ಗ: 16 ಜೂನ್ 2019 (ಫಿಕ್ರೋಖಬರ್ ಸುದ್ದಿ) ಲಾರಿ ಮತ್ತು ಬೈಕ್​ ನಡುವೆ ಡಿಕ್ಕಿ‌ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಮರಸ ಗ್ರಾಮದ ಬಳಿ ನಡೆದಿದೆ. ಬೈಕ್ ಸವಾರ ಹನುಮಂತ ಗದಗ ಜಿಲ್ಲೆಯ ಲಕ್ಷ್ಮೇಶ್ವರದವರಾಗಿದ್ದು, ಇವರ ಜೊತೆಗಿದ್ದ ಸ್ನೇಹಿತ ಮಂಜುನಾಥ್ ಸಹ ಮೃತಪಟ್ಟಿದ್ದಾರೆ. ಉಡುಪಿಯ ಕಾಪುವಿನಲ್ಲಿನ ಪೊಲೀಸ್ ಇಲಾಖೆಯಲ್ಲಿ ಹನುಮಂತನ ಮಾವ ಚಂದ್ರಶೇಖರ್​ರನ್ನು ಭೇಟಿಯಾಗಲು ಹೊರಟಿದ್ದ ವೇಳೆ ಈ ದುರಂತ ಸಂಭವಿಸಿದೆ. ಇನ್ನು ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا