Urdu   /   English   /   Nawayathi

ಭ್ರಷ್ಟಾಚಾರ ಆರೋಪ:15 ಮಂದಿ ತೆರಿಗೆ ಅಧಿಕಾರಿಗಳಿಗೆ ಕೇಂದ್ರದಿಂದ ಬಲವಂತದ ನಿವೃತ್ತಿ

share with us

ನವದೆಹಲಿ: 18 ಜೂನ್ 2019 (ಫಿಕ್ರೋಖಬರ್ ಸುದ್ದಿ) ಆದಾಯ ತೆರಿಗೆ ಇಲಾಖೆಯಲ್ಲಿ ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದ 15 ಮಂದಿ ಅಧಿಕಾರಿಗಳಿಗೆ ಕೇಂದ್ರ ಸರ್ಕಾರವು ಮಂಗಳವಾರ ಕಡ್ಡಾಯ ನಿವೃತ್ತಿ ಪಡೆಯಲು ಸೂಚಿಸಿದೆ. ವಾರದ ಹಿಂದಷ್ಟೇ ಅದಾಯ ತೆರಿಗೆ ಇಲಾಖೆಯಿಂದ 12 ಅಧಿಕಾರಿಗಳನ್ನು ಸರ್ಕಾರ ಕೆಲಸದಿಂದ ವಜಾಗೊಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ ಇಂದು 15 ಮಂದಿ ಅಧಿಕಾರಿಗಳನ್ನು ನಿವೃತ್ತಿ ಪಡೆಯುವಂತೆ ಸೂಚಿಸಲಾಗಿದೆ. ಕೇಂದ್ರ ಪರೋಕ್ಷ ತೆರಿಗೆ ಮತ್ತು ಸುಂಕ ವಿಭಾಗದ ಪ್ರಧಾನ ಆಯುಕ್ತರು, ಹೆಚ್ಚುವರಿ ಆಯುಕ್ತರು, ಸಹಾಯಕ ಆಯುಕ್ತರು ಇದರಲ್ಲಿದ್ದಾರೆ. ದೇಶವೊಂದರ ಭ್ರಷ್ಟಾಚಾರ ಸೂಚ್ಯಂಕದ ಮೇಲೆ ನಿಗಾ ವಹಿಸುವ ‘ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಷನಲ್‌’ ಸಂಸ್ಥೆಯ ಪ್ರಕಾರ ಭಾರತವು 2018ರಲ್ಲಿ  ಮೂರು ಅಂಕಗಳನ್ನು ಗಳಿಸುವ ಮೂಲಕ ಜಾಗತಿಕ ಭ್ರಷ್ಟಾಚಾರ ಸೂಚ್ಯಂಕದಲ್ಲಿ 180 ದೇಶಗಳ ಪೈಕಿ ಪೈಕಿ 78ನೇ ಸ್ಥಾನದಲ್ಲಿದೆ.  

ಪ್ರ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا