Urdu   /   English   /   Nawayathi

ಕಾಂಗ್ರೆಸ್​​ನಲ್ಲೇ ಇರ್ತಿವಿ, ಬಿಜೆಪಿಗೆ ಹೋಗುವ ಅನಿವಾರ್ಯತೆ ಇಲ್ಲ: ಕೈ ಶಾಸಕರ ಸ್ಪಷ್ಟನೆ

share with us

ಬೆಂಗಳೂರು: 01 ಜುಲೈ 2019 (ಫಿಕ್ರೋಖಬರ್ ಸುದ್ದಿ) ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿಯವರ ರಾಜೀನಾಮೆ ಇಂದು ಬಿರುಗಾಳಿ ಎಬ್ಬಿಸಿದೆ. ಈ ಹಿಂದಿನಿಂದಲೂ ಸರ್ಕಾರದ ವಿರುದ್ಧ ಅತೃಪ್ತಿ ವ್ಯಕ್ತಪಡಿಸುತ್ತಿದ್ದ ಕಾಂಗ್ರೆಸ್ ಶಾಸಕರಾದ ಬೀಮಾನಾಯ್ಕ್ , ಪ್ರತಾಪ್ ಗೌಡ ಪಾಟೀಲ್, ಅಮರೇಗೌಡ ಭಯ್ಯಾಪುರ ಇಂದು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ರು. ಬಳ್ಳಾರಿಯ ಜಿಂದಾಲ್ ನಿಲ್ದಾಣದಿಂದ ಕೆಐಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶಾಸಕರು ಬೆಂಗಳೂರಿಗೆ ತೆರಳಿದ್ರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರಾದ ಅಮರೇಗೌಡ ಭಯ್ಯಾಪುರ ಹಾಗೂ ಭಿಮಾನಾಯ್ಕ್, ನಾವು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ಸೇರುವ ಪ್ರಮೇಯವೇ ಇಲ್ಲ. ಕಾಂಗ್ರೆಸ್ ಪಕ್ಷದಲ್ಲೆ ಇರುತ್ತೇವೆ. ಅತೃಪ್ತರ ಗುಂಪಿನಿಂದ ನಮ್ಮ ಹೆಸರು ತೆಗೆದು ಹಾಕಿ ಅಂತ ವಿನಂತಿ ಮಾಡಿಕೊಂಡ್ರು. ಜತೆಗೆ ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್ ರಾಜೀನಾಮೆ ಅವರ ವೈಯುಕ್ತಿಕ ವಿಚಾರವಾಗಿದ್ದು, ಅವರ ಮನವೊಲಿಸುವ ಕೆಲಸ ಮಾಡ್ತೇವೆ. ನಾವು ಬಿಜೆಪಿಗೆ ಹೋಗುವ ಅನಿವಾರ್ಯತೆ ಇಲ್ಲ. ಮಾಧ್ಯಮಗಳು ಪದೇ ಪದೇ ನಮ್ಮ ಹೆಸರುಗಳನ್ನ ತೆಗೆದುಕೊಳ್ಳೋದ್ರಿಂದ ನಮಗೆ ನಮ್ಮ ಕ್ಷೇತ್ರದಲ್ಲಿ ಸಮಸ್ಯೆಯಾಗುತ್ತದೆ. ಅಲ್ಲದೆ ನಮಗೆ ಮಾನ ಮಾರ್ಯದೆ ಇದೆ. ಪಕ್ಷ ಬಿಡುವ ಯೋಚನೆಯೇ ಇಲ್ಲ ಅಂತಾ ಹೇಳಿದ್ರು. ಆದ್ರೆ ಇದ್ದಕ್ಕಿದ್ದಂತೆ ಬಳ್ಳಾರಿಯಿಂದ ಮೂವರು ಶಾಸಕರು ಬೆಂಗಳೂರಿಗೆ ಆಗಮಿಸಿರೋದು ಭಾರೀ ಕೂತೂಹಲಕ್ಕೆ ಕಾರಣವಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا