Urdu   /   English   /   Nawayathi

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಟಾಟಾ ಏಸ್‌-ಖಾಸಗಿ ಬಸ್‌ ಡಿಕ್ಕಿ, ಸ್ಥಳದಲ್ಲೇ 12 ಸಾವು

share with us

ಚಿಕ್ಕಬಳ್ಳಾಪುರ: 03 ಜುಲೈ 2019 (ಫಿಕ್ರೋಖಬರ್ ಸುದ್ದಿ) ಚಿಕ್ಕಬಳ್ಳಾಪುರ ಜಿಲ್ಲೆಯ ಮುರುಗಮಲ್ಲ ಬಳಿ ಖಾಸಗಿ ಬಸ್ ಮತ್ತು ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಇತರ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೋಲಾರ ಮತ್ತು ಚಿಂತಾಮಣಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು  ಪೊಲೀಸರು ತಿಳಿಸಿದ್ದಾರೆ. ಮುರುಗಮಲ್ಲದಿಂದ ಬಸ್  ಚಿಂತಾಮಣಿಯ ಕಡೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗಾಯಾಳುಗಳ ಪೈಕಿ ಹಲವರ  ಸ್ಥಿತಿ ಗಂಭೀರವಾಗಿದೆ. ಘಟನೆಗೆ ಖಾಸಗಿ ಬಸ್ ಚಾಲಕನ ಅತಿ ವೇಗವೇ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.  

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا