Urdu   /   English   /   Nawayathi

ರಾಮಲಿಂಗಾರೆಡ್ಡಿ ವಿರುದ್ಧ ಕ್ರಮ‌ ಇಲ್ಲ: ದಿನೇಶ್​​ ಗುಂಡೂರಾವ್

share with us

ಬೆಂಗಳೂರು: 09 ಜುಲೈ 2019 (ಫಿಕ್ರೋಖಬರ್ ಸುದ್ದಿ) ರಾಮಲಿಂಗಾರೆಡ್ಡಿ ವಿರುದ್ಧ ಕ್ರಮ ಇಲ್ಲ. ಪಕ್ಷದ ವಿರುದ್ಧವಾಗಿ ರಾಮಲಿಂಗಾರೆಡ್ಡಿ ನಡೆದಿಲ್ಲ. ಹಾಗಾಗಿ ಅವರ ವಿಚಾರವನ್ನು ಪ್ರತ್ಯೇಕವಾಗಿ ಪರಿಗಣಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸ್ಪೀಕರ್​ಗೆ ಅತೃಪ್ತರ ವಿರುದ್ಧ ದೂರು ನೀಡಿದ ಬಳಿಕ ಮಾತನಾಡಿದ ಅವರು, ರಾಮಲಿಂಗಾರೆಡ್ಡಿ ಜತೆ ಮತ್ತೊಮ್ಮೆ ಮಾತುಕತೆ ನಡೆಸಲಾಗುತ್ತದೆ. ಸೌಮ್ಯ ರೆಡ್ಡಿ ಕೂಡ ಶಾಸಕಾಂಗ ಸಭೆಗೆ ಹಾಜರಾಗಿದ್ದರು. ಶಾಸಕಾಂಗ ಸಭೆಯಲ್ಲಿ ಇದರ ಬಗ್ಗೆ ಚರ್ಚೆ ಆಗಿದೆ ಎಂದು ಮಾಹಿತಿ ನೀಡಿದರು. ಶಾಸಕಾಂಗ ಪಕ್ಷದ ನಿರ್ಣಯದಂತೆ ಅತೃಪ್ತ ಶಾಸಕರ ವಿರುದ್ಧ ದೂರು ನೀಡಲಾಗಿದೆ. ಮುಂಬೈಗೆ ಹೋಗಿ ಬಿಜೆಪಿ ಜೊತೆ ಕೈ ಜೋಡಿಸಿರುವ ಶಾಸಕರ ವಿರುದ್ಧ ದೂರು ನೀಡಿದ್ದೇವೆ. ಮುಂದಿನ ಕ್ರಮವನ್ನು ಸಭಾಧ್ಯಕ್ಷರು ಕೈಗೊಳ್ಳುತ್ತಾರೆ. ಪಕ್ಷಾಂತರ ನಿಷೇಧ ಕಾಯ್ದೆ ಎಲ್ಲರಿಗೂ ಅನ್ವಯ ಆಗಲಿದೆ. ಅದರ ಪ್ರಕಾರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು. ಪ್ರಜಾಪ್ರಭುತ್ವ ಉಳಿಸುವ ಕೆಲಸ ಆಗಬೇಕಿದೆ. ಬ್ಲಾಕ್​​ಮೇಲ್ ಮಾಡುವ, ಜನರ ತೀರ್ಪಿಗೆ ವಿರುದ್ಧ ಇರುವವರಿಗೆ ತಕ್ಕ ಪಾಠ ಕಲಿಸಬೇಕು. ಅನರ್ಹಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ. ಈಗಲಾದರೂ ಅರ್ಥ ಮಾಡಿಕೊಂಡು ಶಾಸಕರು ವಾಪಸಾಗಲಿ. ನಾವು ಬಲಿಪಶುಗಳಾಗುತ್ತಿದ್ದೇವೆ ಎಂಬುದನ್ನು ಅರ್ಥ ಮಾಡಿಕೊಳ್ಳಲಿ ಎಂದು ಹೇಳಿದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا