Urdu   /   English   /   Nawayathi

ಶಾಸಕರ ಜೊತೆ ಮಾತುಕತೆ ನಡೆಸಿ ಹೋಟೆಲ್‌ನಿಂದ ತೆರಳಿದ ಸಿದ್ಧರಾಮಯ್ಯ

share with us

ಬೆಂಗಳೂರು: 14 ಜುಲೈ 2019 (ಫಿಕ್ರೋಖಬರ್ ಸುದ್ದಿ) ಕಾಂಗ್ರೆಸ್ ಶಾಸಕರು ತಂಗಿರುವ ತಾಜ್ ವಿವಾಂತ ಹೋಟೆಲ್​ಗೆ ಬೆಳಗ್ಗೆ 11-30 ಕ್ಕೆ ಆಗಮಿಸಿದ್ದ ಕಾಂಗ್ರೆಸ್​ ನಾಯಕ ಸಿದ್ಧರಾಮಯ್ಯ ಸುಮಾರು ಮೂರು ಗಂಟೆಗಳ ಕಾಲ ಶಾಸಕರ ಜೊತೆ ಮಾತುಕತೆ ನಡೆಸಿ ಅಲ್ಲಿಂದ ಹೊರನಡೆದಿದ್ದಾರೆ. ನಾಳೆ ಬೆಳಗ್ಗೆ ತಾಜ್ ವಿವಾಂತದಲ್ಲೇ ಕಾಂಗ್ರೆಸ್ ಶಾಸಕಾಂಗ ಸಭೆ ಕರೆದಿರುವುದರಿಂದ ಎಲ್ಲಾ ಶಾಸಕರು ಬಂದಾಗ ಚರ್ಚೆ ಮಾಡೋಣ ಎಂದು ಸಿದ್ದು ತಿಳಿಸಿದ್ದಾರೆ. ಅಲ್ಲದೆ, ನಾಳೆ ನಡೆಯುವ ಶಾಸಕಾಂಗ ಸಭೆಯಲ್ಲೇ ಭೇಟಿ ಮಾಡಿ ಅಧಿವೇಶನದ ಬಗ್ಗೆ ಚರ್ಚೆ ನಡೆಸಲು ತೀರ್ಮಾನಿಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದ ಸಿದ್ಧರಾಮಯ್ಯ, ಕಾರಿನಲ್ಲಿ ಮೌನವಾಗಿಯೇ ಹೊರನಡೆದರು. ಅಲ್ಲದೇ ಇತರ ಶಾಸಕರಿಗೂ ಹೊರಗಡೆ ಮಾತನಾಡದಂತೆ ಸೂಚನೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಸಹ ಬೆಂಗಳೂರಿಗೆ ವಾಪಾಸಾಗಿದ್ದು, ತಾಜ್ ವಿವಾಂತಕ್ಕೆ ಬಂದು ಶಾಸಕರ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا