Urdu   /   English   /   Nawayathi

ಬಿಎಸ್​ವೈ- ಶಾ ವೈಮಾನಿಕ ಸಮೀಕ್ಷೆ: ಅಧಿಕಾರಿಗಳೊಂದಿಗೆ ವಿಮಾನದಲ್ಲೇ ಚರ್ಚೆ

share with us

ನವದೆಹಲಿ: 11 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಜಂಟಿಯಾಗಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಮಧ್ಯಾಹ್ನ ಸುಮಾರು 2.40ರ ವೇಳೆಗೆ ಶಾ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಂತರ ವಾಯುಪಡೆಯ ಹೆಲಿಕಾಪ್ಟರ್​ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ವಿಮಾನದಲ್ಲಿ ಸಿಎಂ ಯಡಿಯೂರಪ್ಪ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ರಾಜ್ಯ 17 ಜಿಲ್ಲೆಗಳ 80 ತಾಲೂಕುಗಳಲ್ಲಿ ಅತಿವೃಷ್ಟಿಯಿಂದ ಜನ ಸಂಕಷ್ಟಕ್ಕೆ ಸಿಲುಕಿ ಜನ-ಜಾನುವಾರು ಸೇರಿ ಅಪಾರ ಪ್ರಮಾಣದಲ್ಲಿ ಆಸ್ತಿ- ಪಾಸ್ತಿ ನಷ್ಟ ಉಂಟಾಗಿದೆ. ಇದನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಬೇಕೆಂದು ರಾಜ್ಯ ಮನವಿ ಮಾಡಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا