Urdu   /   English   /   Nawayathi

ಬೆಳ್ತಂಗಡಿಯಿಂದ ಪಾಕಿಸ್ತಾನಕ್ಕೆ ಸ್ಯಾಟ್​​ಲೈಟ್ ಕರೆ ಹೋಗಿಲ್ಲ: ಎಸ್​​ಪಿ ಸ್ಪಷ್ಟನೆ

share with us

ಮಂಗಳೂರು: 18 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಿಂದ ಪಾಕಿಸ್ತಾನಕ್ಕೆ ಸ್ಯಾಟ್​​ಲೈಟ್ ಕರೆ ಹೋಗಿಲ್ಲ ಎಂದು ದ.ಕ. ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ. ರಾಜ್ಯದಲ್ಲಿ ಭಯೋತ್ಪಾಕ ಕೃತ್ಯ ಸಂಬಂಧ ಹೈಅಲರ್ಟ್ ಘೋಷಣೆ ಬೆನ್ನಲ್ಲೇ, ದೆಹಲಿಯಲ್ಲಿ ಸೆರೆಸಿಕ್ಕ ಉಗ್ರನೊಬ್ಬ ಬೆಳ್ತಂಗಡಿಯಿಂದ ಪಾಕ್​​ಗೆ ಸ್ಯಾಟ್​​ಲೈಟ್ ಕರೆ ಹೋಗಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ ಎಂಬ ಸುದ್ದಿ ಹರಡಿತ್ತು. ಈ ಹಿನ್ನೆಲೆಯಲ್ಲಿ ಎನ್​​ಐಎ ಅಧಿಕಾರಿಗಳು ಕರಾವಳಿಗೆ ಬಂದು ತನಿಖೆ ಮಾಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ದೂರವಾಣಿ ಕರೆ ಮೂಲಕ ಸ್ಪಷ್ಟನೆ ನೀಡಿರುವ ಲಕ್ಷ್ಮೀ ಪ್ರಸಾದ್, ಅಂತಹ ಯಾವುದೇ ಘಟನೆ ಆಗಿಲ್ಲ. ರಾಷ್ಟ್ರೀಯ ತನಿಖಾ ತಂಡದ ಅಧಿಕಾರಿಗಳು ಜಿಲ್ಲೆಗೆ ಬಂದಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا