Urdu   /   English   /   Nawayathi

ವಿದ್ಯುತ್ ದುರಸ್ತಿ ವೇಳೆ ಅವಘಡ... ಪವರ್​ ಶಾಕ್​ನಿಂದ ಕಂಬದಲ್ಲೇ ವ್ಯಕ್ತಿ ವಿಲ ವಿಲ - ವಿಡಿಯೋ

share with us

ದಾವಣಗೆರೆ: 21 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಣಿವಿಹಳ್ಳಿ ಗ್ರಾಮದಲ್ಲಿ ಭಾರಿ ಅವಘಡವೊಂದು ನಡೆದಿದೆ. ಕಂಬವೇರಿದ್ದ ವ್ಯಕ್ತಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಲ್ಲಪ್ಪ (48) ಗಂಭೀರ ಗಾಯಗೊಂಡಿರುವ ವ್ಯಕ್ತಿ. ಸಂಬಂಧಿಕರ ಮನೆಯ ವಿದ್ಯುತ್‍ ಸಂಪರ್ಕ ಕಡಿತಗೊಂಡಿತ್ತು. ಅದನ್ನು ಸರಿಪಡಿಸಲು ವಿದ್ಯುತ್ ಕಂಬವೇರಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಲ್ಲಿದ್ದ ಗ್ರಾಮಸ್ಥರು ಓಡಿ ಬಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಬಳಿಕ ಮಲ್ಲಪ್ಪನನ್ನು ರಕ್ಷಿಸಿ, ಹರಪನಹಳ್ಳಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا