Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಖಮ್ಮಂ: 27 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ಆಕೆ ಮದುವೆಗೂ ಮುನ್ನವೇ ತನ್ನ ಪ್ರಿಯಕರನ ಜೊತೆ ನೂರೊಂದು ಕನಸುಗಳನ್ನು ಕಂಡಿದ್ದಳು. ಆದ್ರೆ, ಆ ಕನಸುಗಳು ಆಕೆಯ ಕೊಲೆಯಲ್ಲಿ ಕಮರಿಹೋಗಿವೆ. ಪೆನುಬಲ್ಲಿ ತಾಲೂಕಿನ ಕುಪ್ಪಿನಕುಂಟ್ಲದ ಕಾವಿಟಿ ತೇಜಸ್ವಿನಿ (20) ಮತ್ತು ಸತ್ತುಪಲ್ಲಿ ಗ್ರಾಮದ ನೀತಿನ್ ಕಾಲೇಜು ವಿದ್ಯಾಭ್ಯಾಸದ ಸಮಯದಲ್ಲಿ ಪರಸ್ಪರ ಪ್ರೀತಿಸುತ್ತಿದ್ದರು. ಪಾಲಿಟೆಕ್ನಿಕಲ್ ಓದುತ್ತಿದ್ದ ತೇಜಸ್ವಿನಿಯ ಕೆಲ ವಿಷಯಗಳು ಉಳಿದುಕೊಂಡಿದ್ದರಿಂದ ಆಕೆ ಮನೆಯಲ್ಲೇ ಕಾಲ ಕಳೆಯುತ್ತಿದ್ದಳು. ಇನ್ನು ನಿತಿನ್ ಬಿಟೆಕ್ ವ್ಯಾಸಂಗ ಮಾಡುತ್ತಿದ್ದಾನೆ. ಆದ್ರೆ, ಇಬ್ಬರು ಮದುವೆಯಾಗಿ ಸುಖ ಸಂಸಾರ ನಡೆಸುವ ಕನಸು ಕಂಡಿದ್ದರು. ಆದ್ರೆ, ತಾಳಿ ಕಟ್ಟಬೇಕಾಗಿದ್ದ ಕೈಗಳೇ ಪ್ರೇಮಿಯನ್ನು ಕೊಲೆ ಮಾಡಿವೆ. ಭಾನುವಾರ ಮನೆಯಲ್ಲಿ ಯಾರಿಗೂ ತಿಳಿಯದಂತೆ ವಾಯುವಿವಾರಕ್ಕೆಂದು ನಿತಿನ್ ಬೈಕ್ನಲ್ಲಿ ಕುಳಿತುಕೊಂಡು ತೇಜಸ್ವಿನಿ ಹೋಗಿದ್ದಾಳೆ. ನಿತಿನ್ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ತನ್ನ ಕೈವಸ್ತ್ರದಿಂದ ಕತ್ತನ್ನು ಬಿಗಿಯಾಗಿ ಹಿಡಿದು ಕೊಲೆ ಮಾಡಿದ್ದಾನೆ. ಬಳಿಕ ಏನೂ ಅರಿಯದ ರೀತಿ ಹಾಸ್ಟೆಲ್ಗೆ ತೆರಳಿದ್ದಾನೆ.
ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
ಸೋಮವಾರ ನನ್ನ ಮಗಳು ನಾಪತ್ತೆಯಾಗಿದ್ದಾಳೆಂದು ತೇಜಸ್ವಿನಿ ಪೋಷಕರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ತನಿಖೆ ಕೈಗೊಂಡ ಪೊಲೀಸರು ತೇಜಸ್ವಿನಿ ಮೊಬೈಲ್ ಕಾಲ್ ರೆಕಾರ್ಡ್ ಲಿಸ್ಟ್ ತೆಗೆದಿದ್ದಾರೆ. ಲಾಸ್ಟ್ ಕಾಲ್ ನಿತಿನ್ಗೆ ಹೋಗಿರುವುದನ್ನು ಗಮನಿಸಿದ್ದಾರೆ. ಕೂಡಲೇ ನಿತಿನ್ನನ್ನು ಫೋನ್ ಮೂಲಕ ಪತ್ತೆ ಹಚ್ಚಿದ್ದಾಗ ಆತ ಹಾಸ್ಟೆಲ್ನಲ್ಲಿರುವುದು ತಿಳಿದಿದೆ. ಕೂಡಲೇ ಹಾಸ್ಟೆಲ್ಗೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಮಗಳನ್ನು ಕಳೆದುಕೊಂಡ ಕುಟಂಬದ ಆಕ್ರಂದನ ಮನ ಕಲುಕವಂತಿತ್ತು. ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |