Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ನವದೆಹಲಿ: 04 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಸಮರ್ಪಕ ನೀತಿ-ನಿರ್ವಹಣೆಯಿಂದ ಭಾರತದ ಆರ್ಥಿಕ ಪರಿಸ್ಥಿತಿ ಇಂದು ಹದಗೆಟ್ಟು ಹೋಗಿದೆ ಎಂದು ಹಣಕಾಸು ಸಚಿವರೂ ಆಗಿದ್ದ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರ ಮಾತನ್ನು ಬೆಂಬಲಿಸಿರುವ ಶಿವಸೇನೆ, ದೇಶದ ಹಿತಾಸಕ್ತಿಗೆ ಮನಮೋಹನ್ ಸಿಂಗ್ ಅವರ ಮಾತುಗಳನ್ನು ಸ್ವಲ್ಪ ಕೇಳಿ ಎಂದು ಸಲಹೆ ನೀಡಿದೆ. ಮನಮೋಹನ್ ಸಿಂಗ್ ಅವರು ದೇಶದ ಖ್ಯಾತ ಅರ್ಥಶಾಸ್ತ್ರಜ್ಞರು, ಅವರು ಹೇಳುವ ಮಾತುಗಳಲ್ಲಿ ಅರ್ಥವಿರುತ್ತದೆ, ಅವರ ಮಾತುಗಳನ್ನು ಅಲಕ್ಷ್ಯ ಮಾಡಿ ಕ್ಷುಲ್ಲಕ ರಾಜಕಾರಣದಲ್ಲಿ ತೊಡಗಬೇಡಿ ಎಂದು ತನ್ನ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿದೆ. ದೇಶದ ಆರ್ಥಿಕ ಸ್ಥಿತಿ ಕುಸಿದಿರುವುದು ತೀವ್ರ ಆತಂಕದ ವಿಷಯ, ಜೂನ್ ತಿಂಗಳ ಶೇಕಡಾ 5ರಷ್ಟು ಆರ್ಥಿಕ ಬೆಳವಣಿಗೆ ನೋಡಿದರೆ ದೀರ್ಘಕಾಲದ ಆರ್ಥಿಕ ಕುಸಿತದಿಂದ ಭಾರತ ನಲುಗಿ ಹೋಗುತ್ತಿದೆ ಎಂದು ಭಾಸವಾಗುತ್ತಿದೆ. ಕ್ಷಿಪ್ರ ವೇಗದಲ್ಲಿ ಭಾರತ ಆರ್ಥಿಕವಾಗಿ ಪುಟಿದೇಳುವ ಸಾಮರ್ಥ್ಯ ಹೊಂದಿದೆ. ಆದರೆ ಸರ್ಕಾರದ ಆರ್ಥಿಕ ಅಸಮರ್ಪಕ ನಿರ್ವಹಣೆಯಿಂದ ಈ ರೀತಿ ಕುಸಿತ ಕಂಡುಬಂದಿದೆ ಎಂದು ಮನಮೋಹನ್ ಸಿಂಗ್ ಕಳೆದ ವಾರ ಹೇಳಿಕೆ ನೀಡಿದ್ದರು. ಆದರೆ ಕೇಂದ್ರ ಸರ್ಕಾರ, ಮನಮೋಹನ್ ಸಿಂಗ್ ಅವರ ಹೇಳಿಕೆಗಳನ್ನು ಅಲ್ಲಗಳೆದಿದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ದೇಶದ ಆರ್ಥಿಕತೆ ವಿಶ್ವದಲ್ಲಿ 11ನೇ ಸ್ಥಾನದಲ್ಲಿತ್ತು. ಅದೀಗ 5ನೇ ಸ್ಥಾನಕ್ಕೇರಿದೆ ಎಂದು ಹೇಳಿದೆ. ಶಿವಸೇನೆ ತನ್ನ ಮುಖವಾಣಿಯಲ್ಲಿ, ''ಸದ್ಯ ದೇಶದ ಆರ್ಥಿಕ ಸ್ಥಿತಿ ಮಂದಗತಿಯಲ್ಲಿದೆ. ಕಾಶ್ಮೀರ ವಿವಾದ ಮತ್ತು ಆರ್ಥಿಕ ಕುಸಿತ ಎರಡು ಭಿನ್ನ ವಿಷಯ. ಮನಮೋಹನ್ ಸಿಂಗ್ ನಂತಹ ತಿಳುವಳಿಕೆಯುಳ್ಳ ವ್ಯಕ್ತಿಗಳು ಆರ್ಥಿಕ ಕುಸಿತ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಆರ್ಥಿಕತೆಯನ್ನು ಮತ್ತೆ ಮೇಲಕ್ಕೆ ತರಲು ಅವರಂತಹ ತಜ್ಞರ ಅಭಿಪ್ರಾಯಗಳನ್ನು ಕೇಳಿ ಆ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಬೇಕು. ಮನಮೋಹನ್ ಸಿಂಗ್ ಅವರ ಸಲಹೆಗಳನ್ನು ಕೇಳುವುದರಲ್ಲಿ ದೇಶದ ಹಿತಾಸಕ್ತಿ ಅಡಗಿದೆ ಎಂದು ಹೇಳಿದೆ. ಭಾರತದ ಹಣಕಾಸು ಮತ್ತು ಆರ್ಥಿಕತೆಯಲ್ಲಿ 35 ವರ್ಷಗಳಿಗೂ ಹೆಚ್ಚು ಕಾಲ ಮನಮೋಹನ್ ಸಿಂಗ್ ಅವರು ತೊಡಗಿದ್ದರಿಂದ ಅವರಿಗೆ ಈ ವಿಷಯದಲ್ಲಿ ಮಾತನಾಡುವ ಹಕ್ಕು ಇದೆ ಎಂದು ಕೂಡ ಶಿವಸೇನೆ ಹೇಳಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |