Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಇಸ್ಲಾಮಾಬಾದ್: 12 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಪಾಕಿಸ್ತಾನದಲ್ಲಿ ಬೇಹುಗಾರಿಕೆ ಆರೋಪದಡಿ ಬಂಧನವಾಗಿರುವ ಕುಲಭೂಷಣ್ ಜಾಧವ್ ಗೆ 2ನೇ ಬಾರಿ ರಾಜತಾಂತ್ರಿಕ ನೆರವು ನೀಡಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಗುರುವಾರ ಹೇಳಿದೆ. ಜಾಧವ್ ರಾಜತಾಂತ್ರಿಕ ನೆರವು ಕುರಿತಂತೆ ಘೋಷಣೆ ಮಾಡಿರುವ ಪಾಕಿಸ್ತಾನ ವಿದೇಶಾಂಗ ಇಲಾಖೆ ವಕ್ತಾರ ಮೊಹಮ್ಮದ್ ಫೈಸಲ್, ಕುಲಭೂಷಣ್ ಜಾಧವ್ಗೆ 2ನೇ ಬಾರಿ ರಾಜತಾಂತ್ರಿಕ ನೆರವು ನೀಡುವ ಯಾವುದೇ ಅವಕಾಶಗಳಿಲ್ಲ ಎಂದು ಹೇಳಿದ್ದಾರೆ. ಆಗಸ್ಟ್ ನಲ್ಲಿ ಜಾಧವ್ಗೆ ರಾಜತಾಂತ್ರಿಕ ನೆರವು ನೀಡಲು ಮುಂದಾಗಿದ್ದ ಪಾಕಿಸ್ತಾನ ಕೆಲವು ಷರತ್ತುಗಳನ್ನು ವಿಧಿಸಿತ್ತು.ಬಳಿಕ ಸೆ.1 ರಂದು ಮೊದಲ ಬಾರಿಗೆ ರಾಜತಾಂತ್ರಿಕ ನೆರವು ನೀಡುವುದಾಗಿ ಘೋಷಣೆ ಮಾಡಿತ್ತು. ಜಾಧವ್"ಗೆ ವಿಯೆನ್ನಾ ಕನ್ವೆನ್ಷನ್ ಪ್ರಕಾರ ಸೆ.2 ರಂದು ರಾಜತಾಂತ್ರಿಕ ನೆರವನ್ನು ನೀಡಲಾಗುತ್ತಿದೆ ಎಂದು ಘೋಷಣೆ ಮಾಡಿತ್ತು. ಪಾಕಿಸ್ತಾನದ ಈ ಪ್ರಸ್ತಾಪಕ್ಕೆ ಭಾರತ ಒಪ್ಪಿಗೆ ಸೂಚಿಸಿತ್ತು. ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಯಾಗಿರುವ ಕುಲಭೂಷಣ್ ಜಾದವ್ ಅವರನ್ನು 2016, ಮಾರ್ಚ್ 3ರಂದು ಪಾಕಿಸ್ತಾನ ಬಂಧನಕ್ಕೊಳಪಡಿಸಿತ್ತು. ಭಾರತದ ಗೂಡಾಚಾರಿಯಾಗಿ ಪಾಕಿಸ್ತಾನದಲ್ಲಿ ವಿಧ್ವಂಸಕ ಕೃತ್ಯಗಳನ್ನು ಆಯೋಜಿಸುತ್ತಿರುವ ಆರೋಪದ ಮೇಲೆ ಕುಲಭೂಷಣ್ ಜಾಧವ್ ಅವರನ್ನು ಖೈಬರ್ ಪಖ್ತುಂಕ್ವ ಪ್ರಾಂತ್ಯದಲ್ಲಿ ಬಂಧಿಸಿದ್ದಾಗಿ ಪಾಕ್ ಸರ್ಕಾರ ಹೇಳಿಕೊಂಡಿತ್ತು. ಆದರೆ, ವೈಯಕ್ತಿಕ ವ್ಯವಹಾರ ಸಂಬಂಧ ಇರಾನ್ ದೇಶಕ್ಕೆ ಹೋಗಿದ್ದಾಗ ಪಾಕಿಸ್ತಾನದವರು ಅಕ್ರಮವಾಗಿ ಕುಲಭೂಷಣ್ ಅವರನ್ನು ಬಂಧಿಸಿ ಕರೆದೊಯ್ದಿದ್ದಾರೆಂದು ಭಾರತ ವಾದ ಮಂಡಿಸಿತ್ತು. ಪಾಕಿಸ್ತಾನದ ಸೇನಾ ನ್ಯಾಯಾಲಯದಲ್ಲಿ ರಹಸ್ಯ ವಿಚಾರಣೆ ನಡೆದ ಬಳಿಕ ಜಾಧವ್ ಅವರಿಗೆ 2017ರ ಏಪ್ರಿಲ್ 10ರಂದು ಮರಣ ದಂಡನೆ ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಭಾರತ ಅಂತರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಿತ್ತು. ಅಂತಿಮ ತೀರ್ಪು ನೀಡುವವರೆಗೂ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಬಾರದು ಎಂದು ಐಸಿಜೆ ತಡೆ ನೀಡಿತ್ತು. ಇದಾದ ಬಳಿಕ 2019ರಪ ಜುಲೈ.17ರಂದು ಐಸಿಜೆ ಅಂತಿಮ ತೀರ್ಪು ನೀಡಿ, ಜಾಧವ್ ಬಿಡುಗಡೆ ಮಾಡಬೇಕೆಂಬ ಭಾರತದ ಮನವಿ ತಿರಸ್ಕರಿಸಿತ್ತು. ಆದರೆ, ಅವರಿಗೆ ಆದಷ್ಟೂ ಶೀಘ್ರಗತಿಯಲ್ಲಿ ರಾಜತಾಂತ್ರಿಕ ಸಂಪರ್ಕಕ್ಕೆ ಅವಕಾಶ ನೀಡುವಂತೆ ಪಾಕಿಸ್ತಾನಕ್ಕೆ ಸೂಚಿಸಿತ್ತು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |