Urdu   /   English   /   Nawayathi

ಬಸ್​ಗಳ ಮೇಲೆ ಕಲ್ಲು ತೂರಾಟ ಪ್ರಕರಣ: ಮಂಗಳೂರಲ್ಲಿ ಮೂವರು ಆರೋಪಿಗಳ ಬಂಧನ

share with us

ಮಂಗಳೂರು: 18 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಮುಲ್ಕಿ ಠಾಣಾ ವ್ಯಾಪ್ತಿಯ ಭಟ್ಟಕೋಡಿ, ಕಿನ್ನಿಗೋಳಿ ಹಾಗೂ ಕಟೀಲು ಪೆಟ್ರೋಲ್ ಬಂಕ್ ಬಳಿ ರಾತ್ರಿ ವೇಳೆ ನಿಂತಿದ್ದ ಬಸ್​ಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಬುಡೋಳಿ ನಿವಾಸಿ ಶಂಶೀರ್ ಎಂ.(27) ಹಾಗೂ, ಅಬ್ದುಲ್ ಸತ್ತಾರ್(21), ನರಿಕೊಂಬು ಗ್ರಾಮದ ನೆಹರು ನಗರ ನಿವಾಸಿ ಮಹಮ್ಮದ್ ರಿಯಾಜ್(28) ಬಂಧಿತ ಆರೋಪಿಗಳು.

Alto car

ಸೆ. 9ರಂದು ಮಧ್ಯರಾತ್ರಿ 2-3 ಗಂಟೆ ಸುಮಾರಿಗೆ ಮುಲ್ಕಿ ಠಾಣಾ ವ್ಯಾಪ್ತಿಯ ಭಟ್ಟಕೋಡಿ, ಕಿನ್ನಿಗೋಳಿ ಹಾಗೂ ಕಟೀಲು ಪೆಟ್ರೋಲ್ ಬಂಕ್ ಬಳಿ ನಿಂತಿದ್ದ 5 ಬಸ್​ಗಳ ಮೇಲೆ ಕಲ್ಲು ತೂರಾಡಿದ ಬಗ್ಗೆ ಮುಲ್ಕಿ ಮತ್ತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಪ್ರಕರಣ ದಾಖಲಿಸಲಾಗಿತ್ತು. ಈ ಬಗ್ಗೆ ಪೊಲೀಸರು ವಿಶೇಷ ತಂಡ ರಚನೆ ಮಾಡಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮೂವರು ಆರೋಪಿಗಳನ್ನು ಕಾರ್ನಾಡು ಗ್ರಾಮದ ಕೊಲ್ನಾಡು ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 3.50 ಲಕ್ಷ ರೂ. ಮೌಲ್ಯದ ಆಲ್ಟೋ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا