Urdu   /   English   /   Nawayathi

ಉಪಸಮರ - ಬಿಬಿಎಂಪಿ ಮೇಯರ್​ ಚುನಾವಣೆ: ಸಿಎಂ ಬಿಎಸ್​ವೈ ನೇತೃತ್ವದಲ್ಲಿ ಮಹತ್ವದ ಸಭೆ

share with us

ಬೆಂಗಳೂರು: 23 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರಕ್ಕೆ ‌ಮುಂದೂಡಿಕೆ ಮಾಡುತ್ತಿದ್ದಂತೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಉಪಚುನಾವಣೆ ಹಾಗೂ ಬಿಬಿಎಂಪಿ ಮೇಯರ್​ ಚುನಾವಣೆ ಕುರಿತು ಸಿಎಂ ಮಹತ್ವದ ಸಭೆ ನಡೆಸುತ್ತಿದ್ದಾರೆ. ಬೆಂಗಳೂರು ಶಾಸಕರನ್ನು ಗೃಹ ಕಚೇರಿಗೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ ಚರ್ಚೆ ಮಾಡುತ್ತಿದ್ದಾರೆ. ಸಭೆಗೆ ಡಿಸಿಎಂ ಅಶ್ವತ್ಥ​ ನಾರಾಯಣ, ಸಚಿವರಾದ ಆರ್ ಅಶೋಕ್, ಸುರೇಶ್ ಕುಮಾರ್, ಶಾಸಕ ಸತೀಶ್ ರೆಡ್ಡಿ, ಎಂ ಕೃಷ್ಣಪ್ಪ ಹಾಗೂ ಎಂಎಲ್​ಸಿಗಳಾದ ನಾರಾಯಣ ಸ್ವಾಮಿ, ರವಿಕುಮಾರ್, ಸಿಎಂ ಬಿಎಸ್​ವೈ ಪುತ್ರ ವಿಜಯೇಂದ್ರ ಕೂಡ ಆಗಮಿಸಿದ್ದಾರೆ. ಅನರ್ಹರ ಅರ್ಜಿ ವಿಚಾರಣೆ ಮುಂದೂಡಿಕೆ, ಉಪ ಚುನಾವಣೆ ‌ಹಾಗೂ ಬಿಬಿಎಂಪಿ ‌ಮೇಯರ್ ಚುನಾವಣೆ ಕುರಿತು ಬೆಂಗಳೂರು ಶಾಸಕರ ಜೊತೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ. ಇನ್ನು ಬಿಬಿಎಂಪಿ ‌ಮೇಯರ್ ಚುನಾವಣೆ ಕುರಿತು ಸಭೆ ಹಿನ್ನೆಲೆಯಲ್ಲಿ ಬೆಂಗಳೂರು ‌ಭಾಗದ ಶಾಸಕರ ಸಭೆಗೆ ಸಂಸದ ತೇಜಸ್ವಿ ಸೂರ್ಯ ಆಗಮಿಸಿದ್ದಾರೆ. ಕೊನೆಯ ಅವಧಿಯಲ್ಲಿ ಬಿಬಿಎಂಪಿಯಲ್ಲಿ ‌ಅಧಿಕಾರ ಹಿಡಿಯುವ ಕುರಿತು ಚರ್ಚೆ ನಡೆಸಲಾಗುತ್ತಿದೆ ಎನ್ನಲಾಗಿದೆ

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا