Urdu   /   English   /   Nawayathi

ಬೀದರ್​ ಸ್ಥಳೀಯ ಪತ್ರಿಕೆ‌ ಸಂಪಾದಕನ ಬರ್ಬರ ಹತ್ಯೆ... ಕಾರಣ ನಿಗೂಢ

share with us

ಬೀದರ್: 28 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ)ಸ್ಥಳೀಯ ದಿನ ಪತ್ರಿಕೆ ಸಂಪಾದಕರೊಬ್ಬರನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಮಂಗಲಪೇಟ್ ಹೊರವಲಯದ ನಿರ್ಜನ ಪ್ರದೇಶದಲ್ಲಿ ಮೃತ ದೇಹ ಪತ್ತೆಯಾಗಿದೆ. ಬೀದರ್​ನ ವಿಜಯಧ್ವನಿ ಎಂಬ ದಿನ ಪತ್ರಿಕೆಯ ಸಂಪಾದಕರಾದ ರವೀಶ್ ಪಂಡಿತ್(39) ಹತ್ಯೆಯಾದವರು. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪೊಲೀಸ್ ಶ್ವಾನದಳದಿಂದ ಶೋಧ ಕಾರ್ಯ ನಡೆದಿದೆ. ನಿನ್ನೆ ತಡರಾತ್ರಿ ಹತ್ಯೆಯಾಗಿರುವ ಮಾಹಿತಿ ಲಭ್ಯವಾಗಿದ್ದು, ಸ್ಥಳಕ್ಕೆ ಎಸ್​ಪಿ ಟಿ. ಶ್ರೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا