Urdu   /   English   /   Nawayathi

ರಾಹುಲ್ ಗಾಂಧಿಗೆ ಕೋರ್ಟ್ ಆದೇಶ ಗೊತ್ತಿರಬೇಕು: ಸಿಎಂ ಬಿಎಸ್​ವೈ ಹೀಗಂದಿದ್ದು ಏಕೆ?

share with us

ಮೈಸೂರು: 02 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಬಂಡೀಪುರ ರಾತ್ರಿ ಸಂಚಾರದ ವಿಚಾರದಲ್ಲಿ ಈಗಾಗಲೇ ಕೋರ್ಟ್ ಆದೇಶ ನೀಡಿದ್ದು, ನಾನು ಅದನ್ನು ಮೀರುವುದಿಲ್ಲ. ರಾಹುಲ್‌ ಗಾಂಧಿಗೆ ಈ ವಿಚಾರ ಗೊತ್ತಿರಬೇಕು ಅಂದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್​ ಗಾಂಧಿಗೆ ತಿರುಗೇಟು ನೀಡಿದ್ದಾರೆ. ಇನ್ನೂ ಸುತ್ತೂರು ಶ್ರೀಗಳ ಫೋನ್ ಕದ್ದಾಲಿಕೆ ಆಗಿರುವುದು ನನಗೆ ಗೊತ್ತಿಲ್ಲ, ಯಾರ ಯಾರ ಟೆಲಿಫೋನ್ ಕದ್ದಾಲಿಕೆ ಆಗಿದೆ ಎಂಬುದು ತನಿಖೆಯಿಂದ ಗೊತ್ತಾಗುತ್ತದೆ. ಈ ಬಗ್ಗೆ ಈಗಲೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಇದೇ ವೇಳೆ ನೆರೆ ಹಾವಳಿ ಪರಿಹಾರ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಯಾವುದೇ ಪಕ್ಷವಾಗಲಿ ಗೊಂದಲ ಉಂಟು ಮಾಡುವುದು ಬೇಡ. ಪ್ರಧಾನಿ ನರೇಂದ್ರ ಮೋದಿಯವರು ವಿದೇಶ ಪ್ರವಾಸದಲ್ಲಿದ್ದರು ಈಗ ಬಂದಿದ್ದಾರೆ. ಇನ್ನೆರಡು ಮೂರು ದಿನಗಳಲ್ಲಿ ಪರಿಹಾರ ಸಿಗುತ್ತದೆ. ‌ಈ ನಡುವೆ ಗೊಂದಲ ಹೇಳಿಕೆ ನೀಡುವುದು ಬೇಡ ಎಂದಿದ್ದಾರೆ. ಒತ್ತಡ, ಸರ್ವ ಪಕ್ಷಗಳ ನಿಯೋಗದ ಅಗತ್ಯವಿಲ್ಲ. ಪ್ರಧಾನಿ ಮೋದಿಗೆ ಎಲ್ಲವೂ ಗೊತ್ತಿದೆ, ‌ಈಗಾಗಲೇ ಅಮಿತ್ ಶಾ ಅವರನ್ನು ಭೇಟಿ ಮಾಡಿ ಬಂದಿದ್ದೇನೆ. ಅವರಿಗೆ ಎಲ್ಲಾ ವಿಚಾರ ತಿಳಿಸಿದ್ದು ತಕ್ಷಣ ಹಣ ಬಿಡುಗಡೆ ಮಾಡಲಿದ್ದಾರೆ ಎಂದಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا