Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಹುಬ್ಬಳ್ಳಿ: 16 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಬಲ್ಡೋಟಾ ಕಂಪನಿಯು ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ಮಾಡಲು ಮತ್ತೆ ಹುನ್ನಾರ ನಡೆಸಿದ್ದು, ಸರ್ಕಾರದ ಮೇಲೆ ಒತ್ತಡ ತರುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಸಿಎಫ್ಡಿ ಹಾಗೂ ಜನಾಂದೋಲನಗಳ ಮಹಾಮೈತ್ರಿಯ ಮುಖ್ಯಸ್ಥ ಎಸ್. ಆರ್ ಹಿರೇಮಠ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅ. 8 ರಂದು ನಡೆದ ವೈಲ್ಡ್ ಲೈಫ್ ಬೋರ್ಡ್ ಸಮಿತಿ ಸಭೆಯಲ್ಲಿ ಕಪ್ಪತ್ತಗುಡ್ಡವನ್ನು ವನ್ಯ ಜೀವಿ ಧಾಮ ಎಂದು ಮುಂದುವರಿಸುವ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಕಪ್ಪತ್ತಗುಡ್ಡವನ್ನು ವನ್ಯ ಜೀವಿ ಧಾಮ ಎಂದು ಮುಂದುವರೆಸಲು ನಿರ್ಧರಿಸಿದೆ. ಇದನ್ನು ಸಿಎಫ್ಡಿ ಕೂಡ ಸ್ವಾಗತಿಸುತ್ತದೆ ಎಂದರು. ಇದೇ ವೇಳೆ ವನ್ಯ ಜೀವಿ ಧಾಮವನ್ನಾಗಿ ಮುಂದುವರೆಸುವ ಸಲುವಾಗಿ ಕಳಿಸಿರುವ ನೋಟಿಫಿಕೇಷನ್ ಹಿಂಪಡೆಯಲು ಒತ್ತಾಯಿಸಿ ಜನರ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಇಂತಹ ಪ್ರಯತ್ನಗಳನ್ನ ಕಂಪನಿ ಕೂಡಲೇ ಕೈಬಿಡಬೇಕೆಂದು ಹಿರೇಮಠ ಹೇಳಿದರು. ಬೆನಗಾನಹಳ್ಳಿಯಲ್ಲಿ 4 ಎಕರೆ 20 ಗುಂಟೆ ಗೋಮಾಳ ಭೂಮಿಯನ್ನು ಡಿ. ಕೆ. ಶಿವಕುಮಾರ್ ಅಕ್ರಮ ಹಾಗೂ ಕಾನೂನು ಬಾಹಿರವಾಗಿ ಖರೀದಿಸಿದ್ದು, ಇದರಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಿರುವ ಬಿ. ಎಸ್. ಯಡಿಯೂರಪ್ಪ ಕೂಡಾ ಶಾಮಿಲಾಗಿದ್ದಾರೆ ಎಂದು ಆರೋಪಿಸಿದರು. ಅಲ್ಲದೇ, ಈ ಪ್ರಕರಣ ಕುರಿತು ಸಿಎಫ್ಡಿಯೂ ಎಸ್. ಎಲ್. ಡಿಯನ್ನು ಹಾಕಿದ್ದು, ಹೋರಾಟವನ್ನು ಮುಂದುವರಿಸಲಾಗುವುದು ಎಂದರು. ಈಗಾಗಲೇ ಡಿ.ಕೆ. ಶಿವಕುಮಾರ್ರನ್ನು ತಿಹಾರ ಜೈಲಿನಲ್ಲಿ ಮುಂದುವರೆದಿದ್ದಾರೆ. ಜೊತೆಗೆ ಆದಾಯ ತೆರಿಗೆ ಹಾಗೂ ಇಡಿ ಡಿ.ಕೆ.ಸುರೇಶ ಅವರನ್ನು ಕೂಡ ತನಿಖೆಗೆ ಒಳಪಡಿಸಿದ್ದು ಸ್ವಾಗತರ್ಹ ಎಂದರು. ಇನ್ನೂ ಡಿ.ಕೆ. ಶಿ ಬ್ರದರ್ಸ್ ಹಾಗೂ ಕುಟುಂಬದವರ ಮೇಲೆ ಸಿ.ಟಿ.ಐಎಫ್ಐಆರ್ ದಾಖಲಿಸಿಕೊಂಡು ಸ್ವತಂತ್ರ ತನಿಖೆ ಆರಂಭಿಸುವಂತೆ ಒತ್ತಾಯಿಸಿದರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |