Urdu   /   English   /   Nawayathi

ಕಾಮಿಡಿ ಸರ್ಕಸ್​ ಬಿಟ್ಟು ಕುಸಿದ ಆರ್ಥಿಕತೆ ಮೇಲೆತ್ತಿ: ಗೋಯಲ್​ಗೆ ಪ್ರಿಯಾಂಕಾ ವಾದ್ರಾ ತಿರುಗೇಟು..!

share with us

ನವದೆಹಲಿ: 20 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಕುಸಿಯುತ್ತಿರುವ ಆರ್ಥಿಕತೆಯನ್ನು ಮೇಲೆತ್ತಿ ಸುಧಾರಿಸುವುದು ಸರ್ಕಾರದ ಕೆಲಸವೇ ಹೊರತು ಕಾಮಿಡಿ ಸರ್ಕಸ್​​ ಮಾಡುವುದರಲ್ಲಿ ಅಲ್ಲ ಎಂದು ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಪಿಯೂಷ್​ ಗೋಯಲ್​ಗೆ ತಿರುಗೇಟು ನೀಡಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸಚಿವ ಪಿಯೂಷ್ ಗೋಯಲ್​, ಅಭಿಜಿತ್​ ಅವರು ಕಾಂಗ್ರೆಸ್​ನ ನ್ಯಾಯ್​ ಅನ್ನು ಬೆಂಬಲಿಸಿದ್ದಾರೆ. ಆದರೆ, ಭಾರತೀಯರು ಅದನ್ನು ತಿರಸ್ಕರಿಸಿದ್ದಾರೆ. ಅಭಿಜಿತ್ ಬ್ಯಾನರ್ಜಿ ಅವರು ಎಡಪಂಥೀಯ ಒಲವು ಇರುವವರು ಎಂದು ಹೇಳಿದ್ದರು. ಅರ್ಥಶಾಸ್ತ್ರ ನೊಬೆಲ್​ ಪುರಸ್ಕೃತ ಅಭಿಜಿತ್​ ಬ್ಯಾನರ್ಜಿ ಅವರನ್ನು ಟೀಕಿಸಿದ್ದ ಗೋಯಲ್​ ಅವರನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ. ಬಿಜೆಪಿಯ ಮುಖಂಡರು ತಮ್ಮ ಕೆಲಸ ಮಾಡುವ ಬದಲು ಇತರರ ಸಾಧನೆಯ ಬಗ್ಗೆ ಮಾತನಾಡುತ್ತಾರೆ. ನೊಬೆಲ್​ ಪುರಸ್ಕೃತರು ಪ್ರಾಮಾಣಿಕವಾಗಿ ಅವರ ಕೆಲಸ ಮಾಡಿದ್ದಾರೆ. ಅದಕ್ಕಾಗಿ ಅವರಿಗೆ ನೊಬೆಲ್​ ದೊರೆತಿದೆ ಎಂದು ಪ್ರಿಯಾಂಕಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا