Urdu   /   English   /   Nawayathi

ಅರಣ್ಯ ರಕ್ಷಕನಿಂದ ವ್ಯಕ್ತಿ ಮೇಲೆ ಹಲ್ಲೆ ಪ್ರಕರಣ: 6 ವಾರದಲ್ಲಿ ವರದಿ ನೀಡಲು​ ಸೂಚನೆ

share with us

ಮಂಗಳೂರು: 20 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಅರಣ್ಯ ರಕ್ಷಕನಿಂದ ಲೋಕೇಶ್‌ ಎಂಬುವವರ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ವಾರದಲ್ಲಿ ವರದಿ ನೀಡುವಂತೆ ಮಾನವ ಹಕ್ಕುಗಳ ಆಯೋಗ ಸೂಚಿಸಿದೆ.

A forest guard

ಸುಬ್ರಹ್ಮಣ್ಯ ಭಾಗಿಮಲೆ ಮೀಸಲು ಅರಣ್ಯದಲ್ಲಿ ಮರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೇಶ್‌ ಕಾಪಾರು ಎಂಬಾತನ ಮೇಲೆ ಸುಳ್ಳು ಆಪಾದನೆ ಹೊರಿಸಿ, ಮಾರಣಾಂತಿಕವಾಗಿ ಬಿಳಿನೆಲೆ ಅರಣ್ಯ ರಕ್ಷಕರು ಹಲ್ಲೆ ನಡೆಸಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿ ಮತ್ತು ಬೆಂಗಳೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ 6 ವಾರದಲ್ಲಿ ವರದಿ ನೀಡುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗ ಸೂಚಿಸಿದೆ. ನೀತಿ ತಂಡ ಎಂಬ ಸಾಮಾಜಿಕ ಸಂಘಟನೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕು ಆಯೋಗಕ್ಕೆ ದೂರು ಸಲ್ಲಿಸಿತ್ತು. ಸೆ. 24ರಂದು ದೂರು ಪರಿಶೀಲಿಸಿದ ಆಯೋಗ ಈ ಸೂಚನೆ ನೀಡಿದೆ. ಇಲ್ಲಿಯ ಪೊಲೀಸ್ ಅಧಿಕಾರಿಗಳ ತನಿಖೆಯಿಂದ ಲೋಕೇಶ್​ ಅವರಿಗೆ ನ್ಯಾಯ ಸಿಗಬಹುದೆಂಬ ನಿರೀಕ್ಷೆ ನಮಗೆ ಇದೆ. ಒಂದು ವೇಳೆ ನ್ಯಾಯ ದೊರೆಯದಿದ್ದರೆ ಲೋಕಾಯುಕ್ತ ಸಂಸ್ಥೆ ಅಥವಾ ಉನ್ನತ ತನಿಖೆಯ ಮೊರೆ ಹೋಗಲಿದ್ದೇವೆ ಎಂಬುದಾಗಿ ನೀತಿ ತಂಡದ ರಾಜ್ಯಾಧ್ಯಕ್ಷ ಜಯನ್​ ತಿಳಿಸಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا