Urdu   /   English   /   Nawayathi

ಚಾಮರಾಜನಗರ: ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಸಾವು

share with us

ಚಾಮರಾಜನಗರ: 28 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಬಹಿರ್ದೆಸೆಗೆಂದು ತೆರಳಿದ್ದ ವೇಳೆ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿರುವ ಪ್ರಕರಣ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ ನಡೆದಿದೆ. ಸಣ್ಣಮ್ಮ ಮೃತ ದುರ್ದೈವಿ, ಇವರು ಗ್ರಾಮದ ಶಿವಶಂಕರ್ ಎಂಬುವರ ಜಮೀನಿನಲ್ಲಿ ಕೂಲಿ ಕೆಲಸಕ್ಕೆಂದು ಹೋಗಿದ್ದರು. ಜಮೀನಿನ ಸುತ್ತಲೂ ವಿದ್ಯುತ್ ಸೋಲಾರ್ ಬಿಡಲಾಗಿತ್ತು. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಧ್ಯೆ ಮಹಿಳೆ ಬಹಿರ್ದೆಸೆಗೆ ತೆರಳಿದ್ದಾರೆ. ಬಹಿರ್ದೆಸೆ ಮುಗಿಸಿ ಮತ್ತೆ ಹಿಂದಿರುಗುವ ವೇಳೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಅಸ್ವಸ್ಥಗೊಂಡರು. ಈ ವೇಳೆ ಅಸ್ವಸ್ಥರಾದ ಮಹಿಳೆ ಸಣ್ಣಮ್ಮ ಅವರನ್ನು ಸಂತೇಮರಹಳ್ಳಿ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸುವ ಸಲುವಾಗಿ ಕರೆದೊಯ್ಯಲಾಯಿತು. ನಂತರ ಚಿಕಿತ್ಸೆ ಕೊಡಿಸಲಾಯಿತಾದರೂ ಅದು ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ಸಂಬಂಧಿಕರಾದ ತಾಯಮ್ಮ ಕುದೇರು ಪೊಲೀಸ್  ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا