Urdu   /   English   /   Nawayathi

ಮನೆ ಮೇಲ್ಛಾವಣಿ ಕುಸಿತ: ಹಾರಿಹೋಯ್ತು ಮುದ್ದು ಕಂದನ ಪ್ರಾಣ, ತಾಯಿ ಸ್ಥಿತಿ ಗಂಭೀರ

share with us

ಬಾಗಲಕೋಟೆ: 31 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಮನೆಯ ಮೇಲ್ಛಾವಣಿ ಕುಸಿದು 11 ತಿಂಗಳ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ತೇರದಾಳ ತಾಲೂಕಿನ ತಮದಡ್ಡಿ ಗ್ರಾಮದಲ್ಲಿ ನಡೆದಿದೆ. ಅಚಲ ಬುಜಬಲಿ ತಿಮ್ಮಣ್ಣವರ ಎಂಬ ಮಗು ಮೃತಪಟ್ಟಿದ್ದು, ಮಗುವಿನ ತಾಯಿ ಅಕ್ಷತಾ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತೇರದಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾರಿ ಹಾಯ್ತು ಪುಟ್ಟ ಕಂದನ ಪ್ರಾಣ, 11 months baby dies

ಮೃತ ಅಚಲ ಬುಜಬಲಿ ತಿಮ್ಮಣ್ಣವರ

ತಮದಡ್ಡಿ ಗ್ರಾಮ ಕಳೆದ ಪ್ರವಾಹದ ವೇಳೆ ಸಂಪೂರ್ಣ ಮುಳುಗಡೆಯಾಗಿತ್ತು. ಮಣ್ಣಿನ ಮನೆಯಾಗಿದ್ದರಿಂದ, ಮನೆ ನೀರಿನಲ್ಲಿ ನೆನೆದು ಕುಸಿತ ಕಂಡಿದೆ ಎನ್ನಲಾಗಿದೆ. ಬೆಳಗಿನ ಜಾವ ನಾಲ್ಕು ಗಂಟೆಗೆ ಮನೆಯ ಮೇಲ್ಛಾವಣಿ ಕುಸಿದಿದ್ದು, ಅದೃಷ್ಟವಶಾತ್ ಮನೆಯಲ್ಲಿ ಮಲಗಿದ್ದ ನಾಲ್ವರಲ್ಲಿ ಇಬ್ಬರು ಎದ್ದು ಹೊರಗಡೆ ಬಂದಿದ್ದು, ತಾಯಿ ಅಕ್ಷತಾ ಹಾಗೂ ಮಗು ಗಾಢ ನಿದ್ರೆಯಲ್ಲಿದ್ದರು. ಹೀಗಾಗಿ ಮಗು ಸಾವನ್ನಪ್ಪಿ, ತಾಯಿ ಗಾಯಗೊಂಡಿದ್ದಾಳೆ. ಸುದ್ದಿ ತಿಳಿದು ಸ್ಥಳಕ್ಕೆ ತೇರದಾಳ ಶಾಸಕ ಸಿದ್ದು ಸವದಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಜೊತೆಗೆ ಬಾಲಕನ ಕುಟುಂಬಸ್ಥರಿಗೆ ಐದು ಲಕ್ಷ ರೂ. ಪರಿಹಾರ ಹಾಗೂ ಬಾಲಕನ ತಾಯಿ ಅಕ್ಷತಾ ಅವರ ಆಸ್ಪತ್ರೆ ವೆಚ್ಚವನ್ನು ಸರ್ಕಾರದಿಂದ ಭರಿಸುವ ಭರವಸೆ ನೀಡಿದ್ದಾರೆ. ತೇರದಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا