Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮಂಗಳೂರು: 09 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ರಾಮಜನ್ಮ ಭೂಮಿ-ಬಾಬರಿ ಮಸೀದಿ ಪ್ರಕರಣದ ಐತಿಹಾಸಿಕ ತೀರ್ಪು ನೀಡಿದ ಸಾಂವಿಧಾನಿಕ ಪಂಚ ಸದಸ್ಯ ಪೀಠದ ನ್ಯಾಯಮೂರ್ತಿಗಳಲ್ಲಿ ಓರ್ವರು ಹಾಗೂ ವಕೀಲರ ತಂಡದಲ್ಲಿದ್ದ ಇಬ್ಬರು ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದಾರೆ. ರಾಮಮಂದಿರ ವಿವಾದಿತ ಭೂಮಿಯ ಐತಿಹಾಸಿಕ ತೀರ್ಪು ನೀಡಿದ ಪಂಚಸದಸ್ಯ ಪೀಠದ ಸದಸ್ಯರಲ್ಲಿ ಓರ್ವರಾಗಿರುವ ನ್ಯಾ.ಅಬ್ದುಲ್ ನಜೀರ್ ಜೆ.ಜೆ. ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಬೆಳುವಾಯಿಯವರು. ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾಗಿದ್ದ ಅಬ್ದುಲ್ ನಜೀರ್ 2017ರಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದರು. ಈ ಹಿಂದೆ ತ್ರಿವಳಿ ತಲಾಖ್ ಪ್ರಕರಣದಲ್ಲೂ ಪ್ರಬುದ್ಧ ತೀರ್ಪು ನೀಡಿದ ನ್ಯಾಯಪೀಠದಲ್ಲಿಯೂ ಇವರಿದ್ದರು ಎನ್ನುವುದು ಗಮನಾರ್ಹ ವಿಚಾರ. ಇನ್ನು ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣದಲ್ಲಿ ಬಾಬ್ರಿ ಮಸೀದಿ ಪರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಹಿರೇಬಂಡಾಡಿ ನಿವಾಸಿ ಅಬ್ದುಲ್ ರಹಿಮಾನ್ ಹಾಗೂ ಸುಳ್ಯ ತಾಲೂಕಿನ ಗಾಂಧಿನಗರ ಕಲ್ಲುಮುಟ್ಲು ನಿವಾಸಿ ಶರೀಫ್ ಎಂಬುವವರು ವಾದಿಸಿದ್ದಾರೆ. ಪುತ್ತೂರಿನ ನ್ಯಾಯಾಲಯದಲ್ಲಿ ವಕೀಲ ವೃತ್ತಿ ಆರಂಭಿಸಿದ ಅಬ್ದುಲ್ ರಹಿಮಾನ್ ಬಳಿಕ ಸರ್ವೋಚ್ಚ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ. ಸುನ್ನಿ ವಕ್ಫ್ ಮಂಡಳಿಯು ಬಾಬ್ರಿ ಮಸೀದಿ ಪರ ವಾದ ಮಂಡಿಸಲು ದೇಶದ ಪ್ರಬಲ ವಕೀಲರ ತಂಡವನ್ನು ಆಯ್ಕೆ ಮಾಡಿತ್ತು. ಈ ತಂಡದ ಸದಸ್ಯರಲ್ಲಿ ಅಬ್ದುಲ್ ರಹಿಮಾನ್ ಕೂಡಾ ಒಬ್ಬರಾಗಿದ್ದಾರೆ. ವಕೀಲ ಶರೀಫ್ ಸುಳ್ಯದ ಎನ್ಎಂಸಿಯಲ್ಲಿ ಪದವಿ ಹಾಗೂ ಕೆವಿಜಿಯಲ್ಲಿ ಎಲ್ಎಲ್ಬಿ ಮುಗಿಸಿದ್ದು, ಸುಪ್ರೀಂಕೋರ್ಟ್ನಲ್ಲಿ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |