Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 12 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಪ್ಲಾಸ್ಟಿಕ್ ಬಳಕೆ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದ್ರೂ, ಒಂಚೂರೂ ಕಡಿವಾಣ ಬಿದ್ದಿಲ್ಲ. ಹೌದು, ಗ್ರಾಹಕರು ಹತ್ತು ರೂಪಾಯಿ ತರಕಾರಿ ತಗೊಂಡ್ರೂ ವ್ಯಾಪಾರಸ್ಥರು ಅವರಿಗೆ ನಿಷೇಧಿತ ಪ್ಲಾಸ್ಟಿಕ್ ನೀಡಬೇಕಾಗಿದೆ. ಒಂದು ವೇಳೆ ನೀಡದಿದ್ರೆ ಗ್ರಾಹಕರು ಖರೀದಿಸದೇ ತೆರಳುತ್ತಾರೆ. ಪ್ಲಾಸ್ಟಿಕ್ ಕೈಚೀಲಗಳನ್ನು ರದ್ದು ಮಾಡುವಲ್ಲಿ ಬಿಬಿಎಂಪಿ ವಿಫಲವಾಗಿದೆ ಎಂದು ಹೇಳಬಹುದಾಗಿದೆ. ಅಂಗಡಿ, ಹೋಟೆಲ್ಗಳಿಗೆ ಫೈನ್ ಹಾಕಿ, ಪರವಾನಗಿ ರದ್ದು ಮಾಡಿದ ಬಳಿಕವೂ ಪ್ಲಾಸ್ಟಿಕ್ ಬಳಕೆ ಮುಂದುವರೆಸಿದ್ರೆ ಏನು ಮಾಡಲು ಸಾಧ್ಯ ಎಂದು ಪಾಲಿಕೆ ಅಧಿಕಾರಿಗಳು ಅಸಹಾಯಕತೆ ಪ್ರದರ್ಶಿಸುತ್ತಿದ್ದಾರೆ. ಪ್ಲಾಸ್ಟಿಕ್ ಬಳಕೆದಾರರಿಗೆ ವಿಧಿಸಿರುವ ದಂಡ, ಬೆಚ್ಚಿಬೀಳಿಸುವಂತಿದೆ. ಅಕ್ಟೋಬರ್ ಒಂದರಿಂದ ನವೆಂಬರ್ ಹತ್ತರವರೆಗೆ ಎಂಟು ಲಕ್ಷದವರೆಗೂ ದಂಡ ವಿಧಿಸಲಾಗಿದೆ. ಅಕ್ಟೋಬರ್ ಒಂದು ತಿಂಗಳಲ್ಲೇ ಒಟ್ಟು 764 ಸಾರ್ವಜನಿಕರಿಂದ 6,12,810 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಇನ್ನು ನವೆಂಬರ್ ಹತ್ತನೇ ತಾರೀಕಿನವರೆಗೆ 331 ಜನರಿಗೆ 2,02,365 ರೂಪಾಯಿ ದಂಡ ಹಾಕಲಾಗಿದೆ. ಇಷ್ಟಾದ್ರೂ ಸಾರ್ವಜನಿಕರು ಮಾತ್ರ ಎಚ್ಚೆತ್ತುಕೊಂಡಿಲ್ಲ. ಎಲ್ಲ ವಿಧಧ ಪ್ಲಾಸ್ಟಿಕ್ ಬಳಕೆ, 2016 ರಿಂದಲೇ ಬ್ಯಾನ್ ಆಗಿದ್ರೂ, ಕಳೆದ ಕೆಲ ತಿಂಗಳಿಂದ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಬಿಬಿಎಂಪಿ ಹಾಗೂ ಪರಿಸರ ಮಾಲಿನ್ಯ ಮಂಡಳಿ ಜಂಟಿಯಾಗಿ ಕೆಲಸ ನಿರ್ವಹಿಸಿತು. ಜನಜಾಗೃತಿ ಮೂಡಿಸಲು, ಪ್ಲಾಸ್ಟಿಕ್ ನಿಷೇಧ ಮೇಳಗಳನ್ನೂ ನಡೆಸಲಾಯ್ತು. ಆದ್ರೂ ಕೂಡ ರಾಜಧಾನಿ ಜನರು ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದಾರೆ. ಇನ್ನು ಅಂಗಡಿ, ಮಳಿಗೆ, ಮಾರುಕಟ್ಟೆಗಳಲ್ಲೂ ಎಗ್ಗಿಲ್ಲದೆ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದಾರೆ.
ನಗರದ ಕೆ.ಆರ್. ಮಾರುಕಟ್ಟೆಯಲ್ಲೇ ಹೂವು, ಹಣ್ಣು, ತರಕಾರಿ ಮಾರಾಟಗಾರರು ಪ್ಲಾಸ್ಟಿಕ್ ಕೈ ಚೀಲದಲ್ಲೇ ಗ್ರಾಹಕರಿಗೆ ವಸ್ತುಗಳನ್ನು ನೀಡುತ್ತಿದ್ದಾರೆ. ವ್ಯಾಪಾರಿಗಳನ್ನು ಕೇಳಿದ್ರೆ, ಜನರಿಗೆ ಪ್ಲಾಸ್ಟಿಕ್ ನೀಡದಿದ್ರೆ ನಮಗೆ ವ್ಯಾಪಾರ ಇಲ್ಲದೆ ನಷ್ಟ ಆಗುತ್ತೆ. ಅದಕ್ಕೇ ಕೊಡ್ತೇವೆ ಅನ್ತಾರೆ ಕೆ.ಆರ್. ಮಾರುಕಟ್ಟೆ ವ್ಯಾಪಾರಿ ಮುದಾಸಿರ್. ಪಾಲಿಕೆಯ ಮೆಡಿಕಲ್ ಹೆಲ್ತ್ ಆಫೀಸರ್ ಸಂಧ್ಯಾ ಪ್ರತಿಕ್ರಿಯಿಸಿ, ಪ್ಲಾಸ್ಟಿಕ್ ಬ್ಯಾನ್ ಬಗ್ಗೆ ಅಧಿಕಾರಿಗಳಿಗೆ, ವ್ಯಾಪಾರಿಗಳಿಗೆ ಸೂಕ್ತ ತರಬೇತಿ ನೀಡಿದ ಬಳಿಕವೂ, ವ್ಯಾಪಾರಸ್ಥರು ಪ್ಲಾಸ್ಟಿಕ್ ಬಳಸುತ್ತಿರುವುದು ಕಂಡುಬಂದಾಗ ದಂಡ ವಿಧಿಸಲಾಗಿದೆ. ಪ್ರತೀ ಹೋಟೆಲ್ನಲ್ಲಿ ಬಳಕೆ ಮಾಡಿದಾಗಲೂ, 25 ರಿಂದ 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಅಲ್ಲದೇ ಕೆ.ಆರ್. ಮಾರುಕಟ್ಟೆ, ಅವೆನ್ಯೂ ರಸ್ತೆ, ಕಲಾಸಿಪಾಳ್ಯಗಳಲ್ಲಿ ಜಪ್ತಿ ಮಾಡಿದಾಗ ಎರಡು ಸಾವಿರ ಕೆ.ಜಿ ಪ್ಲಾಸ್ಟಿಕ್ ವಶಪಡಿಸಿದ್ದೇವೆ. ದಂಡ ಹಾಕಿ, ಪರವಾನಗಿ ರದ್ದು ಮಾಡಿದ್ರೂ ಬಳಸ್ತಾರೆ ಅಂದ್ರೆ ಬೇರೇನು ಮಾಡ್ಬೇಕು ಅನ್ನೋದು ತಿಳಿಯುತ್ತಿಲ್ಲ ಎಂದು ಅಸಹಾಯಕತೆ ಪ್ರದರ್ಶಿಸಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |