Urdu   /   English   /   Nawayathi

ವಿಜಯಪುರ - ಮಂಗಳೂರು ರೈಲಿಗೆ ಅದ್ಧೂರಿ ಸ್ವಾಗತ ಕೋರಿದ ಕರಾವಳಿ ಜನತೆ

share with us

ಮಂಗಳೂರು/ ಸುಬ್ರಹ್ಮಣ್ಯ: 14 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಆಗಮಿಸಿದ ವಿಜಯಪುರ - ಮಂಗಳೂರು ಸೂಪರ್ ಫಾಸ್ಟ್ ರೈಲಿಗೆ ದಕ್ಷಿಣ ಕನ್ನಡ ಜನತೆ ಅದ್ಧೂರಿ ಸ್ವಾಗತ ಕೋರಿದರು. ವಿಜಯಪುರದಿಂದ ಮಂಗಳೂರು ಸಂಪರ್ಕಿಸಲು ಹಾಗೂ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮೊದಲಾದ ಕರಾವಳಿಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳನ್ನು ಸಂದರ್ಶಿಸಲು ಈ ರೈಲು ವಿಶೇಷ ಅನುಕೂಲತೆ ಒದಗಿಸಿದ್ದು, ಸಂಜೆ 6 ಗಂಟೆಗೆ ವಿಜಯಪುರದಿಂದ ಹೊರಡಲಿರುವ ರೈಲು ಬಸವನ ಬಾಗೇವಾಡಿ, ಆಲಮಟ್ಟಿ, ಬಾಗಲಕೋಟೆ, ಗದಗ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಅರಸಿಕೆರೆ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಪುತ್ತೂರು ಮೂಲಕ ಮರುದಿನ ಮಧ್ಯಾಹ್ನ 12.40ಕ್ಕೆ ಮಂಗಳೂರು ತಲುಪಲಿದೆ. ಅದೇ ರೀತಿ ಮಂಗಳೂರಿನಿಂದ ಸಂಜೆ 4.30ಕ್ಕೆ ಹೊರಟು ಮಾರನೇ ದಿನ ಬೆಳಗ್ಗೆ 11.45ಕ್ಕೆ ವಿಜಯಪುರ ತಲುಪಲಿದೆ. ಸ್ವಾಗತ ನೀಡುವ ಸಂದರ್ಭದಲ್ಲಿ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا