Urdu   /   English   /   Nawayathi

ಅಡಿಕೆ ಗೋದಾಮಿಗೆ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ಸರಕು ಬೆಂಕಿಗಾಹುತಿ

share with us

ಕಡಬ: 16 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಅಡಿಕೆ ಹಾಗೂ ತೆಂಗಿನಕಾಯಿ ಇರಿಸಿದ್ದ ಗೋದಾಮಿಗೆ ಬೆಂಕಿ ತಗುಲಿದ ಪರಿಣಾಮ, ಗೋದಾಮು ಸಂಪೂರ್ಣ ಸುಟ್ಟು ಕರಕಲಾಗಿ ಲಕ್ಷಾಂತರ ರೂ. ನಷ್ಟವಾದ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಬಂಟ್ರ ಗ್ರಾಮದ ಪಿಲಿಮಜಲು ರಾಧಾಕೃಷ್ಣ ಭಟ್ ಎಂಬುವರ ಮನೆಯ ಪಕ್ಕದಲ್ಲೇ ಇದ್ದ ಗೋದಾಮಿಗೆ ತಡರಾತ್ರಿ ಬೆಂಕಿ ತಗುಲಿ ಉರಿಯುತ್ತಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿದ ಪರಿಸರದ ಯುವಕರು ತಕ್ಷಣವೇ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡರು. ಆದರೂ ಶುಕ್ರವಾರ ಬೆಳಗ್ಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಘಟನೆಯಲ್ಲಿ ಅಪಾರ ಅಡಿಕೆ ಹಾಗೂ ತೆಂಗಿನಕಾಯಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ ಎನ್ನಲಾಗಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا