Urdu   /   English   /   Nawayathi

ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಭಾರತದ ಅಕ್ರಮ ಆದೇಶ ತಿರಸ್ಕರಿಸಿ: ವಿಶ್ವಸಂಸ್ಥೆಗೆ ಪಾಕ್ ಪತ್ರ

share with us

ನವದೆಹಲಿ: 19 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಕಾಶ್ಮೀರದಲ್ಲಿ ಮತ್ತೆ ಮೂಗು ತೂರಿಸಿರುವ ಪಾಕಿಸ್ತಾನ ವಿಶ್ವಸಂಸ್ಥೆಗೆ ಪತ್ರವೊಂದನ್ನು ಬರೆದಿದ್ದು, ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಭಾರತದ ಅಕ್ರಮ ಆದೇಶವನ್ನು ತಿರಸ್ಕರಿಸುವಂತೆ ಆಗ್ರಹಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದತಿ ಕುರಿತಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮದ್ ಖುರೇಷಿ ಪತ್ರ ಬರೆದಿದ್ದಾರೆ. ವಿಶ್ವಸಂಸ್ಥೆ ಭದ್ರತಾ ಮಂಡಳಿ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಆ್ಯಂಟೋನಿಯೋ ಗುಟೆರ್ರೆಸ್'ಗೆ ಬರೆದಿರುವ ಖುರೇಷಿ, 370ನೇ ವಿಧಿ ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿದ ಭಾರತದ ಅಕ್ರಮ ಆದೇಶವನ್ನು ತಿರಸ್ಕರಿಸುವಂತೆ ಆಗ್ರಹಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ನಮ್ಮ ಆಂತರಿಕ ವಿಚಾರವಾಗಿದ್ದು, ಈ ವಿಚಾರದಲ್ಲಿ ಯಾವುದೇ ದೇಶ ಮಧ್ಯ ಪ್ರವೇಶಿಸಬಾರದು ಎಂದು ಭಾರತ ಬಹಳ ಹಿಂದಿನಿಂದಲೂ ಹೇಳುತ್ತಲೇ ಬರುತ್ತಿದೆ. ಆದರೂ, ಈ ವಿಚಾರದಲ್ಲಿ ಪಾಕಿಸ್ತಾನ ಮೂಗು ತೂರಿಸುತ್ತಲೇ ಇದೆ. ಜಮ್ಮು ಮತ್ತು ಕಾಶ್ಮೀರ ವಿಚಾರವನ್ನು ವಿಶ್ವಸಂಸ್ಥೆ ಮೊದಲಾದ ಅಂತರಾಷ್ಟ್ರೀಯ ವೇದಿಕೆಯ ಮುಂದೆ ತರಲು ಪಾಕಿಸ್ತಾನ ಮೊದಲಿನಿಂದಲೂ ಪ್ರಯತ್ನಿಸುತ್ತಲೇ ಇದೆ. ಆದರೆ, ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರಿವನ್ನ ಭಾರತ ಸರ್ಕಾರ ರದ್ದುಗೊಳಿಸಿದ ಬಳಿಕ ಪಾಕಿಸ್ತಾನದ ಕೋಪ ಮತ್ತಷ್ಟು ಹೆಚ್ಚಾಗುವಂತಾಗಿದೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಈ ವಿಚಾರ ಚರ್ಚೆಯಾಗಬೇಕೆಂದು ಪಾಕಿಸ್ತಾನ ಮನವಿ ಕೂಡ ಮಾಡಿಕೊಂಡಿದ್ದು, ಅದಕ್ಕಾಗಿ ಚೀನಾದ ಮೂಲಕ ಲಾಭಿಯನ್ನೂ ನಡೆಸಿದೆ. ಚೀನಾದ ಪ್ರಯತ್ನದಿಂದಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕೊನೆಗೂ ಕ್ಲೋಸ್ಡ್ ಡೋರ್ ಕನ್ಸಲ್ಟೇಷನ್ಸ್ ಸಭೆಯೂ ನಡೆದಿತ್ತು. 

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا