Urdu   /   English   /   Nawayathi

ಹಣದ ಆಸೆಗೆ ರಾಜೀನಾಮೆ ನೀಡಿದವರಿಗೆ ಮತ ಹಾಕಬೇಡಿ: ಬಸವರಾಜ

share with us

ಹೊಸಪೇಟೆ: 30 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ರೈತರ ಸಮಸ್ಯೆಗಳಿಗೆ ಪರಿಹಾರ ನೀಡದಿರುವ ಪಕ್ಷಕ್ಕೆ ಬೆಂಬಲ ನೀಡಬೇಡಿ. ಬಡವರಿಗಾಗಿ ಕೆಲಸ ಮಾಡದೆ ಕಾಲ ಹರಣ ಮಾಡುವ, ದೇಶದ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿ ಮಾಡಿದವರಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಯು. ಬಸವರಾಜ ಹೇಳಿದರು. ನಗರದಲ್ಲಿ ಮಾತನಾಡಿ, ಬಿಜೆಪಿ ಕೋಮುವಾದಿ, ಬಡವರನ್ನು ತುಳಿಯುವ ಪಕ್ಷವಾಗಿದೆ. ಅಧಿಕಾರದ ಆಸೆಗಾಗಿ ಸರಕಾರ ಬೀಳಿಸಿದ್ದಾರೆ. ಶಾಸಕರನ್ನು ದುಡ್ಡು ಕೊಟ್ಟು ಕೊಂಡುಕೊಂಡಿದ್ದಾರೆ. ಹಣದಾಸೆಗೆ ರಾಜೀನಾಮೆ ನೀಡಿದವರಿಗೆ ಮತ ಹಾಕಬೇಡಿ ಎಂದು ತಿಳಿಸಿದರು. ಬಿಜೆಪಿ ಸಂವಿಧಾನ ವಿರೋಧಿ ಪಕ್ಷ. ಕೇಂದ್ರ ಸರ್ಕಾರ ಬಹುರಾಷ್ಟ್ರೀಯ ಕಂಪನಿಗಳು ದೇಶವನ್ನು ಲೂಟಿ ಮಾಡಲು ನೆರವಾಗುತ್ತಿದೆ. ಜೈಲಿಗೆ ಹೋಗಿ ಬಂದಿರುವ ವ್ಯಕ್ತಿಗಳನ್ನು ಗೆಲ್ಲಿಸಿದರೆ ಎಲ್ಲರು ಜೈಲಿಗೆ ಹೋಗುವಂತೆ ಮಾಡುತ್ತಾರೆ. ನಿಮ್ಮ ಮತಗಳನ್ನು ಮಾರಿಕೊಳ್ಳಬೇಡಿ ಎಂದು ವಾಗ್ದಾಳಿ ನಡೆಸಿದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا