Urdu   /   English   /   Nawayathi

ಉಲ್ಟಾ ಆದ ಕೈ ನಿರೀಕ್ಷೆ: ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

share with us

ಬೆಂಗಳೂರು: 09 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಇದರ ಪರಿಣಾಮವೆಂಬಂತೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ಈ ಸೋಲಿನ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಸಹ ರಾಜೀನಾಮೆ ನೀಡುವ ಸಾಧ್ಯತೆಯಿದೆ. 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 2 ಸ್ಥಾನದಲ್ಲಿ ಮಾತ್ರವೇ ಗೆಲುವು ಸಾಧಿಸುವ ಮೂಲಕ ಭಾರಿ ಮುಖಭಂಗ ಅನುಭವಿಸಿದೆ. ಅನರ್ಹ ಶಾಸಕರು ಹಾಗೂ ಬಿಜೆಪಿಯನ್ನು ಹಣಿಯಲು ಪಣತೊಟ್ಟಿದ್ದ ಕಾಂಗ್ರೆಸ್ ನಾಯಕರಿಗೆ ಈ ಫಲಿತಾಂಶ ಹಿನ್ನಡೆ ಉಂಟು ಮಾಡಿದೆ. ಕಾಂಗ್ರೆಸ್ ಹುಣಸೂರು ಹಾಗೂ ಶಿವಾಜಿನಗರದಲ್ಲಿ ಮಾತ್ರ ಗೆಲುವು ಸಾಧಿಸಿದೆ. ಆದ್ರೆ ಬಿಜೆಪಿ 12 ಕ್ಷೇತ್ರದಲ್ಲಿ ಜಯ ಸಾಧಿಸಿ ಕಾಂಗ್ರೆಸ್​​ಗೆ ದೊಡ್ಡ ಹೊಡೆತ ನೀಡಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಇದು ಮುಜುಗರವನ್ನುಂಟು ಮಾಡಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا