Urdu   /   English   /   Nawayathi

ಬ್ಯಾರಿ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ 6 ಕೋಟಿ ಅನುದಾನ: ರಹೀಂ ಉಚ್ಚಿಲ್​​

share with us

ಮಂಗಳೂರು: 10 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ನಗರದ ನೀರುಮಾರ್ಗ ಸಮೀಪ ಬ್ಯಾರಿ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಆರು ಕೋಟಿ ಅನುದಾನ ನೀಡಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಬ್ಯಾರಿ ಭವನ ನಿರ್ಮಾಣಕ್ಕೆ ಸಲ್ಲಿಸುತ್ತಿದ್ದ ಬೇಡಿಕೆಯನ್ನು ಯಾವ ಸರ್ಕಾರವೂ ಈಡೇರಿಸಿರಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪ್ರಸ್ತಾವನೆ ಸಲ್ಲಿಸಿದಾಗ ಅವರು ಆರು ಕೋಟಿ ನೀಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದರು. ಬ್ಯಾರಿ ಭವನ ನಿರ್ಮಾಣ ಕೆಲಸ ಎಂಟು ತಿಂಗಳಲ್ಲಿ ಪೂರ್ಣವಾಗಬೇಕೆಂದು ನಿರ್ಧರಿಸಲಾಗಿದ್ದು, ಇದರಲ್ಲಿ ಅಧ್ಯಕ್ಷ, ರಿಜಿಸ್ಟ್ರಾರ್ ಹಾಗೂ ಸಿಬ್ಬಂದಿ ಕರ್ತವ್ಯ ನಿರ್ವಹಿಸುವ ಕಚೇರಿ, ಮೀಟಿಂಗ್ ಹಾಲ್, ಸುಸಜ್ಜಿತ ಸಭಾಭವನ, ಗ್ರಂಥಾಲಯಗಳು ಇರಲಿವೆ ಎಂದು ಮಾಹಿತಿ ನೀಡಿದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا