Urdu   /   English   /   Nawayathi

ಬೆಂಗಳೂರು: ಯುವತಿಯ ಸರ ಕಿತ್ತು ಪರಾರಿಯಾಗುತ್ತಿದ್ದ ಕಳ್ಳನ ಬೈಕ್‍ಗೆ ಗುದ್ದಿ ಹಿಡಿದ ಆಟೋ ಚಾಲಕ, ವಿಡಿಯೋ ವೈರಲ್!

share with us

ಬೆಂಗಳೂರು: 11 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಒಂಟಿಯಾಗಿ ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ಹೋಗುತ್ತಿದ್ದ ಕಳ್ಳನನ್ನು ಗಮನಿಸಿದ ಆಟೋ ಚಾಲಕ ಬೈಕ್‍ಗೆ ಡಿಕ್ಕಿ ಹೊಡೆಸಿ ನಂತರ ಆತನನ್ನು ಹಿಡಿದು ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಮಾರತ್ ಹಳ್ಳಿಯಲ್ಲಿ ನಡೆದಿದೆ. ಮಾರತ್ ಹಳ್ಳಿಯ ಮ್ಯಾಕ್ಸ್ ಶೋ ರೂಂ ಎದುರು ಯುವತಿಯೋರ್ವಳು ನಡೆದುಕೊಂಡು ಹೋಗುತ್ತಿದ್ದನ್ನು ಗಮನಿಸಿದ ಸರಗಳ್ಳ ಆಕೆಯ ಕುತ್ತಿಗೆಗೆ ಕೈ ಹಾಕಿ ಸರ ಕಿತ್ತುಕೊಂಡಿದ್ದಾನೆ. ಕೂಡಲೇ ಯುವತಿ ಕಿರುಚಿಕೊಂಡು ಆತನನ್ನು ಹಿಂಬಾಲಿಸಿದ್ದಾಳೆ. ಇದನ್ನು ಗಮನಿಸಿದ ಆಟೋ ಚಾಲಕ ಬೈಕ್ ಗೆ ಡಿಕ್ಕಿ ಹೊಡೆದು ಆತನನ್ನು ಬೀಳಿಸಿ ಹಿಡಿದು ಥಳಿಸಿದ್ದಾರೆ. ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಇನ್ನು ಆಟೋ ಚಾಲಕ ಹನುಮಂತನ ಸಾಹಸ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹನುಮಂತನ ಸಾಹವನ್ನು ಪ್ರಶಂಸಿಸಿದ ವೈಟ್ ಫೀಲ್ಡ್ ಡಿಸಿಪಿ ಅನುಚೇತ್ ಆಟೋ ಚಾಲಕನಿಗೆ ಹತ್ತು ಸಾವಿರ ಬಹುಮಾನ ನೀಡಿ ಅಭಿನಂದಿಸಿದ್ದಾರೆ. ಆರೋಪಿಯನ್ನು ಕೆಜಿ ಹಳ್ಳಿಯ ವಿಘ್ನೇಶ್ ಎಂದು ಗುರುತಿಸಲಾಗಿದೆ.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا