Urdu   /   English   /   Nawayathi

ಜಮೀನಿಗೆ ರಾತ್ರಿ ನೀರು ಹಾಯಿಸಿದ ಯಜಮಾನನಿಗೆ ಬೆಳಗಾಗುಷ್ಟರಲ್ಲಿ ಕಾದಿತ್ತು ಶಾಕ್​!

share with us

ಚಾಮರಾಜನಗರ: 11 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಆಲೆಮನೆ, ಟ್ರಾಕ್ಟರ್ ಹಾಗೂ ಕಾರೊಂದು ಸುಟ್ಟು ಭಸ್ಮವಾಗಿರುವ ಘಟನೆ ಯಳಂದೂರು ತಾಲೂಕಿನ ಅಂಬಳೆಯಲ್ಲಿ ನಡೆದಿದೆ. ಗ್ರಾಮದ ಶಿವಕುಮಾರಸ್ವಾಮಿ ಎಂಬುವವರಿಗೆ ಸೇರಿದ ಜಮೀನಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಆಲೆಮನೆ ಹಾಗೂ ಅದರೊಳಗೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಮತ್ತು ಕಾರು ಸುಟ್ಟು ಕರಕಲಾಗಿದೆ. ಮಂಗಳವಾರ ಮಧ್ಯರಾತ್ರಿವರೆಗೂ ಜಮೀನಿಗೆ ನೀರು ಹಾಯಿಸಿ ಶಿವಕುಮಾರಸ್ವಾಮಿ ತೆರಳಿದ್ದರು ಎಂದು ತಿಳಿದುಬಂದಿದ್ದು, ಮುಂಜಾನೆ ಈ ಅವಘಡ ಆಗಿದೆ ಎನ್ನಲಾಗ್ತಿದೆ. ಅಂದಾಜು 5 ಲಕ್ಷ ರೂ. ನಷ್ಟವಾಗಿದ್ದು ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಶಿವಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಯಳಂದೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا