Urdu   /   English   /   Nawayathi

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ..

share with us

ಮಂಗಳೂರು: 18 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ನಗರದ ಹಲವು ಕಾಲೇಜುಗಳಲ್ಲಿ ಓದುತ್ತಿರುವ ಕೇರಳ ರಾಜ್ಯದ ವಿದ್ಯಾರ್ಥಿಗಳಿಂದ ಪೌರತ್ವ ತಿದ್ದುಪಡಿ (ಸಿಎಎ) ಕಾಯ್ದೆಯ ವಿರುದ್ಧ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗ ಇಂದು ಸಂಜೆ ಪ್ರತಿಭಟನೆ ನಡೆಸಿದರು. ನಗರದ ಶ್ರೀನಿವಾಸ ಕಾಲೇಜು, ಶ್ರೀದೇವಿ ಕಾಲೇಜು, ಅಲೋಶಿಯಸ್ ಕಾಲೇಜು ಹಾಗೂ ಎಂ ವಿ ಶೆಟ್ಟಿ ಕಾಲೇಜಿನ 300ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್ ಷಾ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ ಸಂವಿಧಾನದ ವಿಧಿಗಳನ್ನು ಘೋಷಣೆಯಾಗಿ ಕೂಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا