Urdu   /   English   /   Nawayathi

ಗೋಲಿಬಾರ್ ನಲ್ಲಿ ಮೃತಪಟ್ಟ ಕುಟುಂಬಕ್ಕೆ ತೃಣಮೂಲ ಕಾಂಗ್ರೆಸ್ ನಿಂದ ತಲಾ 5 ಲಕ್ಷ ರೂ ಪರಿಹಾರ

share with us

ಮಂಗಳೂರು: 28 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯ ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರ ಕುಟುಂಬಕ್ಕೆ ಇಂದು ಮಂಗಳೂರಿನಲ್ಲಿ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ನಿಂದ ಪರಿಹಾರ ವಿತರಿಸಲಾಯಿತು. ಮಂಗಳೂರಿಗೆ ಆಗಮಿಸಿದ ತೃಣಮೂಲ ಕಾಂಗ್ರೆಸ್ ನಿಯೋಗ ಮೃತರಿಬ್ಬರ ಕುಟುಂಬಗಳಿಗೆ ಪಕ್ಷದ ವತಿಯಿಂದ ತಲಾ 5 ಲಕ್ಷ ರೂ ಪರಿಹಾರವನ್ನು ವಿತರಿಸಿದರು. ಕುದ್ರೋಳಿಯಲ್ಲಿರುವ ನೌಸೀನ್ ಮತ್ತು ಕಂದಕ್ ನಲ್ಲಿರುವ ಜಲೀಲ್ ಮನೆಗೆ ತೆರಳಿ ಕುಟುಂಬಿಕರಿಗೆ ಸಾಂತ್ವನ ವ್ಯಕ್ತಪಡಿಸಿ ತಲಾ 5  ಲಕ್ಷ ರೂ ಪರಿಹಾರದ ಚೆಕ್ ವಿತರಿಸಿದರು. ಮಾಜಿ ಕೇಂದ್ರ ಸಚಿವ ದಿನೇಶ್ ತ್ರಿವೇದಿ ಮತ್ತು ರಾಜ್ಯಸಭಾ ಸದಸ್ಯ ನದಿಮುಲ್ ಹಖ್ ಅವರು ಇಂದು ಮುಂಜಾನೆ ಮಂಗಳೂರಿಗೆ ಆಗಮಿಸಿ, ಮೃತರ ಮನೆಗೆ ಭೇಟಿ ನೀಡಿದರು.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا