Urdu   /   English   /   Nawayathi

ಸಿಎಎ, ಎನ್​ಆರ್​ಸಿ ವಿರುದ್ಧದ ಪ್ರತಿಭಟನೆ ತಡೆಯದಂತೆ ಪೊಲೀಸರಿಗೆ ಎಚ್ಚರಿಕೆ

share with us

ಮಂಗಳೂರು: 15 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು (ಜ.15) ನಗರದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗಿಯಾಗುವ ನಾಗರಿಕರಿಗೆ ತೊಂದರೆ ಮಾಡಬೇಡಿ. ಅವರನ್ನು ತಡೆಯ ಬೇಡಿ. ಇದರಿಂದ ಕಾನೂನು ಕೈಗೆತ್ತಿಕೊಳ್ಳಬಹುದು ಎಂದು ಮಾಜಿ ಶಾಸಕ ಮೊಯಿದ್ದೀನ್​ ಬಾವ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡ್ಯಾರ್ ಹೊರವಲಯದಲ್ಲಿ ಮುಸ್ಲಿಂ ಸೆಂಟ್ರಲ್​ ಕಮಿಟಿ ಹಮ್ಮಿಕೊಂಡ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಹೊರ ಜಿಲ್ಲೆಗಳಿಂದಲೂ ಅನೇಕ ನಾಗರಿಕರು ಭಾಗವಹಿಸಿದ್ದಾರೆ. ಅವರನ್ನು ಎಲ್ಲಿಯೂ ತಡೆಗಟ್ಟುವ ಪ್ರಯತ್ನಕ್ಕೆ ಪೊಲೀಸರು ಮುಂದಾಗಬಾರದು. ಅವರಿಗೆ ಸಮಸ್ಯೆಯಾದರೆ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುತ್ತದೆ. ದಯಮಾಡಿ ಅವರನ್ನು ತಡೆಯ ಬೇಡಿ ಎಂದು ಮನವಿ ಮಾಡಿದ್ದಾರೆ. ಪೊಲೀಸ್​ ಅಧಿಕಾರಿಗಳು ಪ್ರತಿಭಟನೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا