Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮಂಗಳೂರು: 16 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಸರ್ಕಾರ ಕೋವಿ ಕೊಟ್ಟಿದೆ ಎಂದು ಗುಂಡು ಹಾರಿಸಿದ ಇನ್ಸ್ಪೆಕ್ಟರ್ ಶಾಂತಾರಾಂ, ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ, ಇನ್ಸ್ಸ್ಪೆಕ್ಟರ್ ಷರೀಫ್ ಅವರೇ, ಅವಿಭಜಿತ ದ.ಕ.ಜಿಲ್ಲೆಯವರು ನಿಮ್ಮನ್ನು ಅಷ್ಟು ಸುಲಭವಾಗಿ ಬಿಡೋದಿಲ್ಲ ಎಂದು ನ್ಯಾಯವಾದಿ ಸುಧೀರ್ ಕುಮಾರ್ ಮರೋಳಿ ಹೇಳಿದರು. ಸಿಎಎ ವಿರೋಧಿಸಿ ನಗರದ ಅಡ್ಯಾರ್-ಕಣ್ಣೂರಿನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ಸಮಾವೇಶ ಉದ್ದೇಶಿಸಿ ಡಿ.19 ರಂದು ಪೊಲೀಸ್ ಗೋಲಿಬಾರ್ಗೆ ಮಡಿದ ಜಲೀಲ್ ಕಂದಕ್ ಮತ್ತು ನೌಶೀನ್ ಕುದ್ರೋಳಿಯವರನ್ನು ನೆನಪಿಸಿ ಮಾತನಾಡಿದ ಅವರು, ನಾನಿರುವವರೆಗೂ ಒಬ್ಬನೇ ಒಬ್ಬ ಮುಸ್ಲಿಮ್ ಸಮುದಾಯದ ವ್ಯಕ್ತಿಗೂ ಏನಾಗುವುದಿಲ್ಲವೆಂದು ಯಡಿಯೂರಪ್ಪನವರು ಹೇಳುತ್ತಾರೆ. ನೀವು ಹಾಗೂ ಶೋಭಾ ಕರಂದ್ಲಾಜೆ ಬಿಜೆಪಿ ಬಿಟ್ಟು ಹೋದ ಮೇಲೆ ಶಹೀದ್ ಟಿಪ್ಪು ಸುಲ್ತಾನ್ ಅಂದಿದ್ರು. ಟಿಪ್ಪು ಸುಲ್ತಾನ್ ಅಮರ್ ರಹೇ ಅಂದ್ರಿ. ಆದರೆ ಬಿಜೆಪಿ ಸೇರಿದ ಕೂಡಲೇ ಟಿಪ್ಪುಸುಲ್ತಾನ್ ಮತಾಂಧ ಅಂದ್ರಿ. ನಿಮ್ಮನ್ನು ನಂಬಿ ಜನ ಇದ್ರೆ ನೇತ್ರಾವತಿ ನದಿಗೆ ಬಿದ್ದು ಸಾಯಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 'ವಿ ದ ಪೀಪಲ್ ಆಫ್ ಇಂಡಿಯಾ' ಅಂತ ಹೇಳುವ ಸಂವಿಧಾನದ ಪೀಠಿಕೆ, ವಿಧಿ ವಿಧಾನಗಳು ಕೇಶವಾನಂದ ಭಾರತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿರುವ ಆದೇಶ ಜಾರಿಯಲ್ಲಿ ಇರುವವರೆಗೆ ಒಬ್ಬನೇ ಒಬ್ಬ ಮುಸ್ಲಿಮನನ್ನು, ಹಿಂದೂವನ್ನು ಈ ದೇಶದಿಂದ ಹೊರಕಳಿಸಲು ಸಾಧ್ಯವಿಲ್ಲ. ನಾವು ರಾಜ್ಯ ಸರ್ಕಾರ, ಕೇಂದ್ರ ಸರ್ಕಾರಗಳ ವಿರುದ್ಧ ಜನಜಾಗೃತಿ ನಡೆಸುತ್ತಿದ್ದೇವೆ ಎಂದರು. ಬಿಜೆಪಿ ಅಧಿಕಾರದಲ್ಲಿರುವ ಅಸ್ಸೋಂ, ಉತ್ತರ ಪ್ರದೇಶ, ಕರ್ನಾಟಕದಲ್ಲಿ ಗೋಲಿಬಾರ್ ನಡೆಸಲಾಗುತ್ತಿದೆ. ಪ್ರತಿಭಟನೆ ಮಾಡುವುದು ದೇಶದ ಜನರ ಹಕ್ಕು. ಪ್ರಶ್ನೆ ಮಾಡಲು ಜನಪ್ರತಿನಿಧಿಗಳು ಯಾರೆಂದು ಸುಪ್ರೀಂಕೋರ್ಟ್ ನ್ಯಾಯಧೀಶರು ಪ್ರಶ್ನಿಸಿದ್ದಾರೆ. ಯೋಗಿ ಆದಿತ್ಯನಾಥ್ ಅವರನ್ನು ಯಾರೂ ಯೋಗಿ ಎಂದು ಕರೆಯಬೇಕಾಗಿಲ್ಲ. ಅವರು ಅಯೋಗ್ಯ ಆದಿತ್ಯನಾಥ್ ಎಂದು ಸುಧೀರ್ ಕುಮಾರ್ ಮರೋಳಿ ಛೇಡಿಸಿದರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |