Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಉಳ್ಳಾಲ: 18 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಅಟೋ ಮೊಬೈಲ್ ಅಂಗಡಿಯೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಶುಕ್ರವಾರ ಮುಂಜಾನೆ ದೇರಳಕಟ್ಟೆಯಲ್ಲಿ ನಡೆದಿದೆ. ದೇರಳಕಟ್ಟೆಯ ವಿದ್ಯಾರತ್ನ ಕ್ರಾಸ್ ಎಂಬಲ್ಲಿನ ಭಾರತ್ ಅಟೋ ಮೊಬೈಲ್ ಅಂಗಡಿಗೆ ಕಿಡಗೇಡಿಗಳು ಬೆಂಕಿ ಹಚ್ಚಿದ್ದು, ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಎರಡು ದಿನಗಳ ಹಿಂದಷ್ಟೇ ಪೌರತ್ವ ಪ್ರತಿಭಟನೆಗೆ ತರಲಾಗಿದ್ದ ಲಾರಿ ಹಾಗೂ ಅದರಲ್ಲಿದ್ದ ಕುರ್ಚಿಗಳಿಗೆ ಬೆಂಕಿ ಹಾಕಲಾಗಿತ್ತು. ಆ ಘಟನೆಯಲ್ಲಿ ಕುರ್ಚಿ ಸಹಿತ ಸಂಪೂರ್ಣ ಲಾರಿ ಸುಟ್ಟು ಕರಕಲಾಗಿತ್ತು.
ದುಷ್ಕರ್ಮಿಗಳು ಅಂಗಡಿಯ ಶಟರ್ ಬಾಗಿಲನ್ನು ಕಬ್ಬಿಣದ ರಾಡ್ ಮೂಲಕ ಮೇಲೆತ್ತಿ, ಒಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಸ್ಥಳದಲ್ಲಿ ಗಸ್ತಿಗೆ ಬಂದ ಪೊಲೀಸರು ಅಂಗಡಿಯಲ್ಲಿ ಬೆಂಕಿ ಉರಿಯುವುದನ್ನು ಕಂಡು ಕೂಡಲೇ ಅಗ್ನಿ ಶಾಮಕದಳಕ್ಕೆ ಮಾಹಿತಿ ನೀಡಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ಇದರಿಂದಾಗಿ ಉಂಟಾಗಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿಹೋಗಿದೆ.
ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |