Urdu   /   English   /   Nawayathi

ಬೆಂಗಳೂರು: ಅನುಮಾನಾಸ್ಪದ ಸ್ಫೋಟ, ಶಾಸಕ ಹ್ಯಾರಿಸ್ ಸೇರಿ ನಾಲ್ವರಿಗೆ ಗಾಯ

share with us

ಬೆಂಗಳೂರು: 23 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಸಿಲಿಕಾನ್ ಸಿಟಿ ಬೆಂಗಳೂರಿನ ವಿವೇಕನಗರದಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿದ ಪರಿಣಾಮ ಶಾಸಕ ಎನ್‌.ಎ.ಹ್ಯಾರಿಸ್‌ ಸೇರಿದಂತೆ ಕೆಲವರಿಗೆ ಗಾಯವಾಗಿರುವ ಘಟನೆ ಇಂದು ಸಂಜೆ ಸಂಭವಿಸಿದೆ. ಕಾರ್ಯಕ್ರಮವೊಂದರಲ್ಲಿ ಶಾಸಕ ಹ್ಯಾರಿಸ್ ಪಾಲ್ಗೊಂಡಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ. ತಕ್ಷಣ ಶಾಸಕರು ಸೇರಿದಂತೆ ಗಾಯಗೊಂಡವರನ್ನು ಸೈಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವೇಕನಗರದಲ್ಲಿ ಹುಟ್ಟುಹಬ್ಬದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಹಾರಿಸ್ ಅವರು ವೇದಿಕೆಯಲ್ಲಿ ಕುಳಿತಿದ್ದರು. ಈ ವೇಳೆ ವಸ್ತುವೊಂದು ಬಂದು ಅಪ್ಪಳಿಸಿ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ಪಡೆದ ಪೋಲೀಸರು, ಶ್ವಾನದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಶಾಸಕರ ಪುತ್ರ ನಲಪಾಡ್ ಪ್ರತಿಕ್ರಯಿಸಿದ್ದು "ಇದೊಂದು ಪೂರ್ವನಿಯೋಜಿತ ಕೃತ್ಯ, ಯಾರೋ ಉದ್ದೇಶಪೂರ್ವಕ ಮಾಡಿದ್ದಾರೆ. ತಂದೆ ಪ್ರಾಣಾಪಾಯದಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದಾರೆ" ಎಂದರು.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا