Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಮಂಗಳೂರು: 23 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಆದಿತ್ಯ ಆರೋಪಿ ಎಂದು ಖಾತರಿಯಾದ ಮೇಲೆ ಬಂಧಿಸಲಾಗಿದೆ. ನಿನ್ನೆ ರಾತ್ರಿವರೆಗೆ ನಡೆದ ವಿಚಾರಣೆಯಲ್ಲಿ ಹಲವು ವಿಷಯಗಳನ್ನು ತಿಳಿಸಿದ್ದಾನೆ ಎಂದು ಪೊಲೀಸ್ ಆಯುಕ್ತ ಡಾ. ಪಿ. ಎಸ್. ಹರ್ಷ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಈ ಹಿಂದಿನ ಬಾಂಬ್ ಬೆದರಿಕೆ ಪ್ರಕರಣ ಮತ್ತು ಈಗಿನ ಬಾಂಬ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈತನಿಗೆ ಸಜೆ ಆಗುತ್ತದೆ. ಈ ಮೊದಲು ಆದಿತ್ಯ ಚಿಕ್ಕಬಳ್ಳಾಪುರದಲ್ಲಿ ಜೈಲು ಸಜೆ ಅನುಭವಿಸಿದ್ದಾನೆ. ಜೈಲಿನಲ್ಲಿದ್ದಾಗಲೂ ಇನ್ನೂ ಏನಾದರು ದೊಡ್ಡ ಅನಾಹುತ ಮಾಡಬೇಕು ಎಂದು ಯೋಚಿಸುತ್ತಿದ್ದ ಎಂದು ತಿಳಿದು ಬಂದಿತ್ತು. ಇದನ್ನೇ ಆತ ಒಪ್ಪಿಕೊಂಡಿದ್ದಾನೆ. ಜೈಲಿನಿಂದ ಹೊರಬಂದ ಮೇಲೆ ಇಂಟರ್ನೆಟ್ಗಳಿಂದ ಬಾಂಬ್ ತಯಾರಿ ಮತ್ತು ಸ್ಫೋಟಕಗಳ ಬಗ್ಗೆ ಆಳವಾದ ಅಭ್ಯಾಸ ಮಾಡಿರುವುದು ಕಳವಳಕಾರಿ ಅಂಶ ಎಂದರು. ಬಾಂಬ್ ತಯಾರಿಕೆ ಬಗ್ಗೆ ತಿಂಗಳುಗಟ್ಟಲೆ ರಿಸರ್ಚ್ ಮಾಡಿದ್ದಾನೆ. ಆನ್ಲೈನ್ನಲ್ಲಿ ಮತ್ತು ಮಾರುಕಟ್ಟೆಗಳಲ್ಲಿ ದೊರೆಯುವ ಸ್ಫೋಟಕ ವಸ್ತಗಳು ಬಗ್ಗೆ ತಿಳಿದಿದ್ದಾನೆ. ಮುಕ್ತ ಮಾರುಕಟ್ಟೆಯಲ್ಲಿ ಕೊಂಡರೆ ಸಿಕ್ಕಿಬೀಳಬಹುದು ಎಂಬ ಭಯದಿಂದ ವಸ್ತುಗಳನ್ನು ಖರೀದಿಸಲು ಹೋಗಿಲ್ಲ. ಅಲ್ಲದೆ ಯಾವ ವಸ್ತುಗಳಿಂದ ಸ್ಫೋಟಕ ತಯಾರಿಸಬಹುದು ಮತ್ತು ಅವುಗಳನ್ನು ಹೇಗೆ ಹೊಂದಿಸಬೇಕು ಎಂಬುದರ ಬಗ್ಗೆ ಅರಿತಿರುವುದಾಗಿ ಆದಿತ್ಯ ತಿಳಿಸಿದ್ದಾನೆ ಎಂದು ಆಯುಕ್ತರ ಮಾಹಿತಿ ನೀಡಿದರು. ಮೈಸೂರು ಕಾಲೇಜಿನಲ್ಲಿ ಎಂಬಿಎ ಪದವೀಧರ ಮತ್ತು ಬಿಇ ಮೆಕಾನಿಕಲ್ ಇಂಜಿಯರ್ ಪದವೀಧರನೂ ಹೌದು ಎಂದು ಒಪ್ಪಿಕೊಂಡಿದ್ದಾನೆ. ಮೊದಲು ವಿವಿಧ ಖಾಸಗಿ ಬ್ಯಾಂಕ್ಗಳಲ್ಲಿ ಉದ್ಯೋಗ ಮಾಡಿದ ಆದಿತ್ಯ, ಒಂದೇ ಕಡೆ ಬಹಳ ದಿನಕಾಲ ಕೆಲಸ ಮಾಡುತ್ತಿರಲಿಲ್ಲ. ಒಂದೇ ಕಚೇರಿಯಲ್ಲಿ ಕುಳಿತು ಕೆಲಸ ಮಾಡುವುದು ಆಗುವುದಿಲ್ಲ ಎಂದು ಪದೇಪದೆ ಕೆಲಸ ಬದಲಿಸಿದೆ ಎಂದು ತಿಳಿಸಿದ್ದಾನೆ ಎಂದರು. ಪೀಣ್ಯದಲ್ಲಿ ಕಾಮಧೇನು ಆಟೋ ಮೊಬೈಲ್ಸ್ ಕೆಲ ದಿನಗಳ ಕಾಲ ಮಾತ್ರ ಕೆಲಸ ಮಾಡಿ, ನಂತರ ಎಂಎನ್ಸಿ ಕಂಪನಿಯಲ್ಲಿ ತನ್ನ ದಾಖಲೆಗಳನ್ನು ತಿದ್ದಿ ಕೆಲಸಕ್ಕೆ ಸೇರುತ್ತಾನೆ. ಆದರೆ ಸಿಕ್ಕಿ ಬೀಳುವ ಭಯದಿಂದ ಅಲ್ಲಿಯೂ ಕೆಲಸ ತೊರೆಯುತ್ತಾನೆ. ನಂತರ ಸೆಕ್ಯುರಿಟಿ ಗಾರ್ಡ್ ಆಗಿ ಮೂಡುಬಿದಿರೆ ಕಾಲೇಜು ಹಾಗೂ ಉಜಿರೆ ಕಾಲೇಜುಗಳಲ್ಲಿ ಕೆಲಸ ಮಾಡಿದ್ದೇನೆ ಎಂದು ತಿಳಿಸಿದ್ದಾನೆ ಎಂದರು.
ವಿ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |