Urdu   /   English   /   Nawayathi

ಮಂಗಳೂರು ಬಾಂಬ್ ಆರೋಪಿ ಆದಿತ್ಯ ರಾವ್ ಗೆ 10 ದಿನಗಳ ಪೊಲೀಸ್ ಕಸ್ಟಡಿ

share with us

ಮಂಗಳೂರು: 23 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಇಲ್ಲಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯ ರಾವ್ಗೆ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದೆ. ಮಂಗಳೂರಿನ ಪ್ರಥಮ ದರ್ಜೆ 6ನೇ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಪೊಲೀಸರು ಆರೋಪಿಯನ್ನು ಹಾಜರುಪಡಿಸಿದರು. ನಂತರ ನ್ಯಾಯಾಧೀಶರಾದ ಕಿಶೋರ್ ಕುಮಾರ್ ಕೆ.ಎನ್ ಅವರು ಆರೋಪಿಯನ್ನು 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಸೋಮವಾರ ಸ್ಪೋಟಕವನ್ನಿರಿಸಿ ಆರೋಪಿ ಆದಿತ್ಯ ರಾವ್ ನಾಪತ್ತೆಯಾಗಿದ್ದ. ಬುಧವಾರ ಬೆಂಗಳೂರಿನಲ್ಲಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದ. ನಂತರ ಹೆಚ್ಚಿನ ವಿಚಾರಣೆಗೆ ಆತನನ್ನು ಮಂಗಳೂರು ಪೊಲೀಸರ ವಶಕ್ಕೆ ಒಪ್ಪಿಸಿ ಮಂಗಳೂರಿಗೆ ಕರೆತರಲಾಗಿತ್ತು.

ಉ, ವಾ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا