Urdu   /   English   /   Nawayathi

ಅನಾಥ ಶವಗಳ ಅಂತ್ಯ ಸಂಸ್ಕಾರ ನಡೆಸುತ್ತಿದ್ದ ಮೊಹಮ್ಮದ್ ಶರೀಫ್​ಗೆ ಪದ್ಮ ಪ್ರಶಸ್ತಿ ಗೌರವ

share with us

ಅಯೋಧ್ಯೆ: 26 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಅನಾಥ ಶವಗಳ ಅಂತ್ಯಸಂಸ್ಕಾರ ನಡೆಸುತ್ತಿದ್ದ ಉತ್ತರ ಪ್ರದೇಶದ ಮೊಹಮ್ಮದ್ ಶರೀಫ್ ಅವರಿಗೆ ಭಾರತ ಸರ್ಕಾರ, ದೇಶದ ನಾಲ್ಕನೇ ಅತಿದೊಡ್ಡ ನಾಗರಿಕ ಪ್ರಶಸ್ತಿ 'ಪದ್ಮಶ್ರೀ' ನೀಡಿ ಗೌರವಿಸಿದೆ.

ಭಾರತ ಸರ್ಕಾರ ಪ್ರತಿಷ್ಠಿತ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನ ಗಣರಾಜ್ಯೋತ್ಸವ ಮುನ್ನಾ ದಿನ ನಿನ್ನೆ ಘೋಷಣೆ ಮಾಡಿತ್ತು. ಸಮಾಜ ಸೇವೆ ಹಿನ್ನೆಲೆಯಲ್ಲಿ ಮೊಹಮ್ಮದ್ ಶರೀಫ್​ ಅವರಿಗೆ ಪದ್ಮಶ್ರಿ ಪ್ರಶಸ್ತಿ ನೀಡಲಾಗಿದೆ. ಈ ಬಗ್ಗೆ ಮಾತನಾಡಿರುವ ಶರೀಫ್, 27 ವರ್ಷಗಳ ಹಿಂದೆ ನನ್ನ ಮಗನನ್ನು ಸುಲ್ತಾನಪುರದಲ್ಲಿ ಕೊಲೆ ಮಾಡಲಾಗಿತ್ತು. ಒಂದು ತಿಂಗಳ ನಂತರ ನನಗೆ ಈ ವಿಷಯ ತಿಳಿಯಿತು. ಅಂದಿನಿಂದ ಅನಾಥ ಶವಗಳ ಅಂತ್ಯ ಸಂಸ್ಕಾರ ನೆರವೇರಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ನಾನು ಇಲ್ಲಿಯವರೆಗೆ 3,000 ಹಿಂದೂಗಳು ಮತ್ತು 2,500 ಮುಸ್ಲಿಮರ ಶವಗಳ ಅಂತ್ಯಸಂಸ್ಕಾರ ಮಾಡಿದ್ದೇನೆ ಎಂದು ಮೊಹಮ್ಮದ್ ಶರೀಫ್ ತಿಳಿಸಿದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا