Urdu   /   English   /   Nawayathi

ಗಣತಂತ್ರ ದಿನವೇ ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ..

share with us

ಕಲಬುರಗಿ: 27 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಗಣರಾಜ್ಯೋತ್ಸವ ದಿನವೇ ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿ ವಿಕೃತಿ ಮೆರೆದಿರುವ ಘಟನೆ ಆಳಂದ ತಾಲೂಕಿನ ಹಿತ್ತಲ ಶಿರೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಂಬೇಡ್ಕರ್ ಫಲಕಕ್ಕೆ ಸೆಗಣಿ ಮೆತ್ತಿ, ಚಪ್ಪಲಿ ಹಾರ ಹಾಕಿರುವ ದುಷ್ಕರ್ಮಿಗಳು, ಭಾವಚಿತ್ರವನ್ನು ವಿಕಾರಗೊಳಿಸಿ ಅಪಮಾನ ಮಾಡಿದ್ದಾರೆ. ಅಲ್ಲದೆ ಬಾವುಟವನ್ನು ನೆಲಕ್ಕುರುಳಿಸಿದ್ದಾರೆ. ಮಧ್ಯರಾತ್ರಿ ನಸುಕಿನ ಜಾವ ದುಷ್ಕರ್ಮಿಗಳು ಈ ಕೃತ್ಯ ಮಾಡಿ ಪರಾರಿಯಾಗಿದ್ದಾರೆ. ಘಟನೆಗೆ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ತಕ್ಷಣ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿವೆ. ನಿಂಬರ್ಗಾ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا