Urdu   /   English   /   Nawayathi

ಮದ್ಯ ನಿಷೇಧ ಮಾಡಲು ಮಹಿಳೆಯರ ಆಗ್ರಹ: ಎರಡನೇ ದಿನಕ್ಕೆ ಕಾಲಿಟ್ಟ ಜಲ ಸತ್ಯಾಗ್ರಹ

share with us

ಬಾಗಲಕೋಟೆ: 29 ಜನುವರಿ 2020 (ಫಿಕ್ರೋಖಬರ್ ಸುದ್ದಿ) ರಾಜ್ಯದಲ್ಲಿ ಮದ್ಯ ನಿಷೇಧ ಮಾಡಬೇಕು ಎಂದು ಆಗ್ರಹಿಸಿ, ಕೂಡಲಸಂಗಮದಲ್ಲಿ ಜಲ ಸತ್ಯಾಗ್ರಹ ನಡೆಸುತ್ತಿರುವ ಮಹಿಳೆಯರು ಇಂದು ಕೂಡ ತಮ್ಮ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ. ಮದ್ಯ ನಿಷೇಧ ಆಂದೋಲನ ಸಂಘಟನೆ ಮೂಲಕ‌ ವಿವಿಧ ಗ್ರಾಮೀಣ ಪ್ರದೇಶಗಳಿಂದ ಕೂಲಿ ಕಾರ್ಮಿಕರು ಆಗಮಿಸಿ, ತ್ರಿವೇಣಿ ಸಂಗಮದ ನದಿಯ ನೀರಿನಲ್ಲಿ ಇಳಿದು, ಬೀರು ಬೇಡ, ನೀರು ಬೇಕು. ಮದ್ಯ ಬೇಡ ಶಿಕ್ಷಣ ಬೇಕು ಎಂದು ಸರ್ಕಾರದ ವಿರುದ್ಧ ಘೋಷಣೆ ಹಾಕುತ್ತಾ ಜಲ ಸತ್ಯಾಗ್ರಹ ನಡೆಸಿದ್ದಾರೆ. ಈ ಸಮಯದಲ್ಲಿ ಮದ್ಯ ನಿಷೇಧ ಆಂದೋಲನ ಸಂಘಟನೆಯ ಪ್ರಮುಖರಾದ ಶ್ರೀಮತಿ ಸ್ವರ್ಣ ಭಟ್ ಮಾತನಾಡಿ, ಕಳೆದ ಐದು ವರ್ಷಗಳಿಂದ ರಾಜ್ಯಾದ್ಯಂತ ಹೋರಾಟ ಮಾಡುತ್ತಾ ಬರಲಾಗಿದೆ. ಈಗಿನ ಹೋರಾಟದಿಂದ ಮುಂದಿನ ದಿನಮಾನದಲ್ಲಿ ರಾಜ್ಯದಲ್ಲಿ ಮದ್ಯ ನಿಷೇಧ ಆಗಲಿದೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು. ಇನ್ನು ಗ್ರಾಮೀಣ ಪ್ರದೇಶದಲ್ಲಿ ಕುಡಿತ ಚಟದಿಂದ ತೊಂದರೆಗೆ ಒಳಗಾಗಿರುವ ಮಹಿಳೆಯರು ಆಗಮಿಸಿದ್ದಾರೆ. ನಾಳೆ ಬಹಿರಂಗ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸಿ, ಮುಂದಿನ ಹೋರಾಟದ ಬಗ್ಗೆ ರೂಪುರೇಷೆಗಳನ್ನು ಹಾಕಿಕೊಳ್ಳಲಾಗುವುದು ಎಂದು ತಿಳಿಸಿದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا