Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ವಾಷಿಂಗ್ಟನ್(ಅಮೆರಿಕ): 01 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ಜಿಎಸ್ಟಿಯಲ್ಲಿನ ಸುಧಾರಣೆ, ನೋಟು ಅಮಾನ್ಯೀಕರಣದಂತಹ ಕೆಲವು ಸಂಗತಿಗಳಿಂದ ಭಾರತವು 2019ರಲ್ಲಿ ಹಠಾತ್ ಆರ್ಥಿಕ ಕುಸಿತ ಅನುಭವಿಸಿತು. ಆದರೆ, ಇದನ್ನು ಆರ್ಥಿಕ ಹಿಂಜರಿತವಲ್ಲ ಎಂದು ಐಎಂಎಫ್ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜೀವಾ ಹೇಳಿದ್ದಾರೆ. ಭಾರತದ ಆರ್ಥಿಕತೆ 2019 ರಲ್ಲಿ ಹಠಾತ್ ಕುಸಿತವನ್ನು ಅನುಭವಿಸಿದೆ. ಇದು 2020 ರಲ್ಲಿ ಶೇ 5.8 (ಬೆಳವಣಿಗೆಯ ದರ) ಮತ್ತು ನಂತರ 2021 ರಲ್ಲಿ ಶೇ 6.5 ಕ್ಕೆ ಏರಿಕೆಯಾಗಬಹುದೆಂದು ನಾವು ಭಾವಿಸುತ್ತೇವೆ ಎಂದರು. ಈ ಆರ್ಥಿಕ ಮಂದಗತಿಗೆ ಮುಖ್ಯ ಕಾರಣ ನಾನ್-ಬ್ಯಾಂಕಿಂಗ್ ಹಣಕಾಸು ಸಂಸ್ಥೆಗಳು ಪ್ರಕ್ಷುಬ್ಧತೆ ಅನುಭವಿಸುತ್ತಿರುವುದು. ಭಾರತವು ಕೆಲವು ಪ್ರಮುಖ ಆರ್ಥಿಕ ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದು, ಇವು ದೀರ್ಘಾವಧಿಯವರೆಗೆ ದೇಶಕ್ಕೆ ಪ್ರಯೋಜನಕಾರಿಯಾಗಬಹುದು. ಆದರೆ, ಅವು ಅಲ್ಪಾವಧಿಯ ಪರಿಣಾಮವನ್ನು ಬೀರುತ್ತವೆ ಎಂದು ಕ್ರಿಸ್ಟಲಿನಾ ಅಭಿಪ್ರಾಯಪಟ್ಟಿದ್ದಾರೆ. ಉದಾಹರಣೆಗೆ, ಏಕೀಕೃತ ತೆರಿಗೆ ವ್ಯವಸ್ಥೆ ಮತ್ತು ನೋಟು ಅಮಾನ್ಯೀಕರಣ. ಇವುಗಳು ಕಾಲಾನಂತರದಲ್ಲಿ ದೇಶಕ್ಕೆ ಪ್ರಯೋಜನಕಾರಿಯಾದವು. ಆದರೆ, ಅವು ಅಲ್ಪಾವಧಿಯಲ್ಲಿ ಆರ್ಥಿಕತೆಗೆ ಧಕ್ಕೆ ಉಂಟುಮಾಡುತ್ತವೆ ಎಂದರು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಗೆ ಮತ್ತು ಯಾವೆಲ್ಲ ಅಂಶಗಳೊಂದಿಗೆ ಬಜೆಟ್ ಮಂಡಿಸುತ್ತಾರೆ ಎಂದು ಕಾದು ನೋಡಬೇಕಿದೆ. ಐಎಂಎಫ್ (ಅಂತಾರಾಷ್ಟ್ರೀಯ ಹಣಕಾಸು ನಿಧಿ) ಭಾರತದ ಬಗ್ಗೆ ಆಶಾವಾದಿಯಾಗಿದೆ ಎಂದು ಹೇಳಿದ್ದಾರೆ. ಐಎಂಎಫ್ ವ್ಯವಸ್ಥಾಪಕ ನಿರ್ದೇಶಕರು, ಪ್ರಸ್ತುತ ಆರ್ಥಿಕ ಕುಸಿತವನ್ನು ಆರ್ಥಿಕ ಹಿಂಜರಿತ ಎಂದು ಬಣ್ಣಿಸಲು ಸಾಧ್ಯವಿಲ್ಲ. ಆದರೆ ಇದು ಗಮನಾರ್ಹ ಮಂದಗತಿಯಾಗಿದೆ, ಆರ್ಥಿಕ ಹಿಂಜರಿತವಲ್ಲ ಎಂದರು. ಉತ್ತಮವಾದ ಆರ್ಥಿಕ ಮೂಲಭೂತ ಅಂಶಗಳನ್ನು ಪಡೆಯಲು ಭಾರತ ಏನು ಮಾಡುತ್ತದೆ ಎಂಬುದನ್ನು ನೋಡಲು ಐಎಂಎಫ್ ಉತ್ಸುಕವಾಗಿದೆ. ಭಾರತಕ್ಕೆ ಮುಖ್ಯವಾದ ಒಂದು ವಿಷಯವೆಂದರೆ ಬಜೆಟ್ ಆದಾಯವು ಗುರಿಗಿಂತ ಕಡಿಮೆಯಾಗಿದೆ. ಅದು ದೇಶಕ್ಕೆ ತಿಳಿದಿದೆ. ಹಣಕಾಸು ಸಚಿವರಿಗೆ ಅದು ತಿಳಿದಿದೆ. ಅವರು ಬಜೆಟ್ ಆದಾಯ ಸಂಗ್ರಹಣೆಯನ್ನು ಹೆಚ್ಚಿಸಬೇಕಾಗಿರುವುದರಿಂದ ತಮ್ಮ ಹಣಕಾಸಿನ ಸ್ಥಿತಿಯನ್ನು ಸುಧಾರಿಸಬಹುದು ಎಂದು ಸಲಹೆ ನೀಡಿದರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |